• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ನಡೆದ ಸಾರಿಗೆ ನೌಕರರ ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾದರೆ, ಇನ್ನು ಕೆಲವರು ಗೌರಾಗಿದ್ದರು. ಹೀಗಾಗಿ, ಬಸ್‌ ಸಂಚಾರ ಬಂದ್‌ ಆಗಿದ್ದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಪ್ರಯಾಣಿಕರು ಖಾಸಗಿ ವಾಹನಗಳನ್ನೇ ಅವಲಂಬಿಸುವಂತಾಗಿತ್ತು. ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಬಳಕೆ ಕಡಿಮೆ ಇರುವುದರಿಂದ, ಜನರು ತಮ್ಮ ಕೆಲಸ ಕಾರ್ಯಗಳಿಗೆ ಸ್ವಂತ ವಾಹನಗಳ ಮೊರೆ ಹೋಗಿದ್ದರು. ಬೇರೆ ಬೇರೆ ಜಿಲ್ಲೆಗಳಿಗೆ ಹೋಗಬೇಕಿದ್ದ 500ಕ್ಕೂ ಅಧಿಕ ಬಸ್‌ಗಳಲ್ಲಿ ಕೇವಲ 147 ಬಸ್‌ಗಳು ಮಾತ್ರ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಂಚರಿಸಿದವು.
ಪ್ರಾಮಾಣಿಕ ರಾಜಕಾರಣಿಗಳಲ್ಲಿ ದೇಶಮುಖ ಪ್ರಮುಖರು
ಕನ್ನಡಪ್ರಭ ವಾರ್ತೆ ನಾಲತವಾಡ ರಾಜ್ಯದಲ್ಲಿ ಸಾಕಷ್ಟು ರಾಜಕಾರಣಿಗಳನ್ನು ಕಂಡಿದ್ದೇವೆ. ಬಹಳಷ್ಟು ಜನರಿಗೆ ಅವರ ಹೆಸರು ಸಹ ನೆನಪಿಗೆ ಬರವುದಿಲ್ಲ, ಅಂತಹದ್ದರಲ್ಲಿ ಮೃತಪಟ್ಟ 35 ವರ್ಷ ನಂತರವೂ ಅವರನ್ನು ನೆನಪು ಮಾಡಿಕೊಳ್ಳುತ್ತಾರೆ ಎಂದರೆ ಅದು ಅವರ ಪ್ರಾಮಾಣಿಕ ರಾಜಕಾರಣಕ್ಕೆ ನೀಡುವ ಬೆಲೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಪಟ್ಟಣದ ಮುಖ್ಯ ರಸ್ತೆಗಳಿಗೆ ಸಾಧಕ ಹೆಸರು
ಕನ್ನಡಪ್ರಭ ವಾರ್ತೆ ಸಿಂದಗಿಸಿಂದಗಿ ನೆಲದಲ್ಲಿ ಅನೇಕ ಆದರ್ಶ ವ್ಯಕ್ತಿಗಳು, ಮಹನೀಯರು ಹುಟ್ಟಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸಿಂದಗಿಯ ಹೆಸರನ್ನು ಬೆಳೆಸಿದ್ದಾರೆ. ಆ ಮಹನೀಯರನ್ನು ಅಜರಾಮರವಾಗಿಸಲು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಪಟ್ಟಣದ ಪ್ರಮುಖ ರಸ್ತೆಗಳಿಗೆ ಸಾಧಕರ ಹೆಸರನ್ನಿಡಲು ಮುಂದಾಗಿದ್ದು, ಇದು ಪ್ರಶಂಸೆಗೆ ಪಾತ್ರವಾಗಿದೆ.
ಶಕ್ತಿ ಯೋಜನೆ ಯಶಸ್ವಿಗೊಳಿಸಿದ ಸಾರಿಗೆ ನೌಕರರ ಋಣ ತೀರಿಸಿ
ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಯಲ್ಲಿಯೇ ಮಹತ್ವಾಕಾಂಕ್ಷಿ ಗ್ಯಾರಂಟಿಯಾದ ಶಕ್ತಿ ಯೋಜನೆಯನ್ನು 100ಕ್ಕೂ 100 ರಷ್ಟು ಯಶಸ್ವಿಗೊಳಿಸಿದ ಕೀರ್ತಿ ಸಾರಿಗೆ ಇಲಾಖೆ ನೌಕರರಿಗೆ ಸಲ್ಲಬೇಕು. ಹೀಗಾಗಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಾರಿಗೆ ನೌಕರರ ಋಣವನ್ನು ರಾಜ್ಯ ಸರ್ಕಾರ ತೀರಿಸಬೇಕು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಒತ್ತಾಯಿಸಿದರು.
ಹೊಸ, ಹಳೆಯ ಪಿಂಚಣಿ ಯೋಜನೆ ಪರಿಷ್ಕರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಸಭೆಯಲ್ಲಿ 2025 ಮಾರ್ಚ್ 25ರಂದು ಮಂಡಿಸಿರುವ ಹೊಸ ಪಿಂಚಣಿ ಮತ್ತು ಹಳೆ ಪಿಂಚಣಿಯನ್ನು ಪರಿಷ್ಕರಿಸುವಂತೆವಂತೆ ಒತ್ತಾಯಿಸಿ ರಾಜ್ಯ ನಿವೃತ್ತ ನೌಕರರ ಸಂಘದಿಂದ ಅಪರ ಜಿಲ್ಲಾಧಿಕಾರಿಗಳಾದ ಸೋಮನಿಂಗ ಗೆಣ್ಣೂರ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಎಲೆಮರೆ ಕಾಯಿಯಂತಿದ್ದ ಕಲಾವಿದ ನಮಗೆ ಆದರ್ಶ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸಾಧನೆ ಮಾಡಿ ಎಲೆಮರೆ ಕಾಯಿಯಂತೆ ಬದುಕುತ್ತಿರುವ ಜಾನಪದ ಹಿರಿಯ ಕಲಾವಿದ ಬಸವರಾಜ ಹಾರಿವಾಳ ನಿಸ್ವಾರ್ಥ ಭಾವದಿಂದ ಇಡೀ ಜೀವನವನ್ನು ಸಮಾಜಮುಖಿ ಕಾರ್ಯಕ್ಕೆ ಮುಡಿಪಾಗಿಟ್ಟಿದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ದೇಶ ಭದ್ರವಾಗಿದ್ದರೆ ಸಾಮಾಜಿಕ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ಕೊಲ್ಹಾರ: ದೇಶ ಭದ್ರವಾಗಿದ್ದರೆ ಮಾತ್ರ ದೇಶವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮುಂದುವರಿಯಲು ಸಾಧ್ಯ ಎಂದು ವಿಜಯಪುರ ಡಿವೈಎಸ್ಪಿ ಬಸವರಾಜ ಯಲಿಗಾರ ಹೇಳಿದರು.
ಹಳೆ ನಲ್ಲಿ ಸಂಪರ್ಕ ತೆಗೆದು ಹೊಸ ಸಂಪರ್ಕಕ್ಕೆ ನೀರು ಪೂರೈಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಪೂರ್ವದಲ್ಲಿ ಓವರ್ ಹೆಡ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಿ, ಕ್ಲೋರಿನೇಷನ್ ಮಾಡಿ, ನೀರಿನ ಗುಣಮಟ್ಟ ಪರೀಕ್ಷಿಸಬೇಕು. ಗ್ರಾಮಗಳಲ್ಲಿನ ಹಳೆಯ ಸಂಪರ್ಕಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಜಲ ಜೀವನ್ ಮಿಷನ್ ಯೋಜನೆಯಡಿ ನೀಡಲಾದ ಹೊಸ ನಲ್ಲಿ ಸಂಪರ್ಕಗಳ ಮೂಲಕ ನೀರನ್ನು ಪೂರೈಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.
ಕ್ಷೇತ್ರದ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಸುಧಾರಣೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಬಸವನಬಾಗೇವಾಡಿ ಮತಕ್ಷೇತ್ರದ ಎಲ್ಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆ ಮಾಡುವ ಜೊತೆಗೆ ಆಯಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿಎ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಹಾಸ್ಟೆಲ್‌ಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಜಿಲ್ಲೆಯ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಜೀವನ ಸುಂದರಗೊಳಿಸಲು ಸರ್ಕಾರ ನೀಡಿರುವ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿರುವ ಕುರಿತು ಅಧಿಕಾರಿಗಳು ಸ್ವಯಂಪ್ರೇರಿತವಾಗಿ ವಾರಕ್ಕೊಂದು ಸಲ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸಲಹೆ ನೀಡಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 420
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved