ಶ್ರದ್ಧಾಭಕ್ತಿಯಿಂದ ನಡೆದ ರಾಯರ ೪೩೦ನೇ ವರ್ಧಂತಿ ಉತ್ಸವಕನ್ನಡಪ್ರಭ ವಾರ್ತೆ ವಿಜಯಪುರ ನಗರದ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಘವೇಂದ್ರ ಸ್ವಾಮಿಗಳವರ ೪೩೦ ನೇ ವರ್ಧಂತಿ ಉತ್ಸವವನ್ನು ಅತ್ಯಂತ ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು. ಬೆಳಿಗ್ಗೆ ವೃಂದಾವನದ ನಿರ್ಮಾಲ್ಯ ವಿಸರ್ಜನ, ಬಳಿಕ ಪಂಚಾಮೃತ ಅಭಿಷೇಕ, ಭಕ್ತ ಮಂಡಳಿಯಿಂದ ಅಷ್ಟೋತ್ತರ ಪಾರಾಯಣ ನಡೆದವು. ಇದೇ ಸಂದರ್ಭದಲ್ಲಿ ವೃಂದಾವನಕ್ಕೆ ನೂತನ ವಸ್ತ್ರ ಸಮರ್ಪಿಸಲಾಯಿತು.