ವಿಜಯಪುರ ಜಿಲ್ಲಾ ಬಂದ್ ಬಹುತೇಕ ಯಶಸ್ವಿಕನ್ನಡಪ್ರಭ ವಾರ್ತೆ ವಿಜಯಪುರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯುವ ಪ್ರಯತ್ನ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳು ಕರೆ ನೀಡಿದ್ದ ವಿಜಯಪುರ ಬಂದ್ ಬಹುತೇಕ ಯಶಸ್ವಿಯಾಗಿದೆ. ಬಂದ್ ಪ್ರಯುಕ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜಿಲ್ಲೆಯ ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಬುದ್ಧಿಜೀವಿಗಳು ಭಾಗವಹಿಸಿದ್ದರು.