• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯತ್ನಾಳ ಪರ ಅಭಿಮಾನಿಗಳ ಬೃಹತ್ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಛಾಟನೆ ಮಾಡಿದ ಕ್ರಮ ಖಂಡಿಸಿ ವಿವಿಧ ಸಂಘಟನೆಗಳ ಪ್ರಮುಖರು, ಯತ್ನಾಳ ಅಭಿಮಾನಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಸಿದ್ದೇಶ್ವರ ದೇವಾಲಯದಿಂದ ಆರಂಭಗೊಂಡ ಪ್ರತಿಭಟನೆ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಗಾಂಧಿ ವೃತ್ತ ತಲುಪಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕೃತಿ ದಹಿಸಿ ಅಸಮಾಧಾನ ಹೊರಹಾಕಿದರು. ವಿಜಯೇಂದ್ರ ವಿರುದ್ದ ಘೋಷಣೆ ಕೂಗಿದರು. ಯತ್ನಾಳರೇ ಹೆದರಬೇಡಿ ನಾವು ನಿಮ್ಮೊಂದಿಗಿದ್ದೇವೆ, ನಿಮ್ಮೊಂದಿಗೆ ಇದ್ದೇವೆ ಎಂದು ಯತ್ನಾಳರ ಭಾವಚಿತ್ರ ಹಿಡಿದು ಬೆಂಬಲ ಘೋಷಿಸಿದರು.
ಸಮಾಜಕ್ಕೆ ರಾಜಕೀಯ ತಳಕು ಹಾಕುವುದು ಸರಿಯಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಒಂದು ರಾಷ್ಟ್ರೀಯ ಪಕ್ಷ ತೆಗೆದುಕೊಂಡಿರುವ ಶಾಸಕ ಯತ್ನಾಳ ಉಚ್ಛಾಟನೆ ನಿರ್ಧಾರವನ್ನು ಒಂದು ಸಮಾಜಕ್ಕೆ ಹಚ್ಚುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸುರೇಶ ಬಿರಾದಾರ ಹೇಳಿದರು.
ಹುತಾತ್ಮ ಕ್ರಾಂತಿಕಾರಿಗಳ ಸ್ಮರಣೆ ಅವಶ್ಯ
ಕನ್ನಡಪ್ರಭ ವಾರ್ತೆ ವಿಜಯಪುರ: ಭಾರತದ ಸ್ವಾತಂತ್ರ ಹೋರಾಟಕ್ಕೆ ಕ್ರಾಂತಿಕಾರಿ ಬದಲಾವಣೆಯ ದಿಕ್ಕನ್ನು ನೀಡಿ ಭಾರತ ಮಾತೆ ಬ್ರಿಟಿಷರ ಕಪಿಮುಷ್ಠಿಯಿಂದ ಬಿಡುಗಡೆಯಾಗಬೇಕು ಎಂಬ ಉದ್ದೇಶಕ್ಕೆ ಪ್ರಾಣ ತ್ಯಾಗ ಮಾಡಿದ ಅಮರ ಕಲಿಗಳನ್ನು ಸ್ಮರಿಸುವುದು ದೇಶದ ಪ್ರತಿಯೊಬ್ಬರ ಕರ್ತವ್ಯ ಎಂದು ವಾಗ್ಮಿ ಪ್ರಕಾಶ ಮಲ್ಪೆ ಹೇಳಿದರು.
ವಿಜಯಪುರ ಜಿಲ್ಲಾ ಬಿಜೆಪಿ ಕೋರ್‌ ಕಮಿಟಿ ಸಭೆ
ಕನ್ನಡಪ್ರಭ ವಾರ್ತೆ ವಿಜಯಪುರ: ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ಕುರಿತು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಛಾಟನೆ ಬಗ್ಗೆ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಠರಾವು ಪಾಸು ಮಾಡಿದ ಪ್ರತಿ ಓದಿದರು.
ಸ್ವ ಸಹಾಯ ಸಂಘಗಳ ಮೂಲಕ ಸಾಮಾಜಿಕ ಜಾಗೃತಿ
ಕನ್ನಡಪ್ರಭ ವಾರ್ತೆ ಇಂಡಿ ಸಾಮಾಜಿಕವಾಗಿ, ಧಾರ್ಮಿಕವಾಗಿ ಮತ್ತು ಆರ್ಥಿಕವಾಗಿ ಜನರಿಗೆ ಸ್ಥೈರ್ಯ ತುಂಬುವ ಕೆಲಸವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಯತ್ನಾಳ ಉಚ್ಛಾಟನೆ ಖಂಡಿಸಿ ಬೃಹತ್ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಹಿಂದುತ್ವವಾದಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಉಚ್ಛಾಟಿಸಿದ್ದನ್ನು ಖಂಡಿಸಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ಚೌಕ್‌ನಲ್ಲಿ ಗುರುವಾರ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಾನವ ಸರಪಳಿ ನರ್ಮಿಸಿ, ಕೆಲಕಾಲ ರಸ್ತೆ ಸಂಚಾರ ಬಂದ್ ಮಾಡಿದರು.
ಮುಸ್ಲಿಂ ಓಲೈಕೆಗಾಗಿ ಮೀಸಲಾತಿ ಘೋಷಣೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮುಸ್ಲಿಂ ಮತಗಳನ್ನು ಉಳಿಸಿಕೊಳ್ಳಲು ಓಲೈಕೆಗಾಗಿ ಶೇ.4 ರಷ್ಟು ಮೀಸಲಾತಿ ನೀಡುವುದರೊಂದಿಗೆ ವಿವಿಧ ಸೌಲಭ್ಯಗಳನ್ನು ನೀಡಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಮಾತ್ರವಲ್ಲದೇ ಗುಲಾಮರನ್ನಾಗಿ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಇಂತಹ ಸರ್ಕಾರವನ್ನು ಕಿತ್ತೆಸೆದು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯಕರ್ತರು, ಮುಖಂಡರು ಮುಂದಾಗಬೇಕು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಹೇಳಿದರು.
ಕೃಷಿ ಜತೆ ಹೈನುಗಾರಿಕೆಗೆ ಮಹತ್ವ ನೀಡಿ: ಶಾಸಕ ಯಶವಂತರಾಯಗೌಡ
ಕನ್ನಡಪ್ರಭ ವಾರ್ತೆ ಇಂಡಿ ಭಾರತ ಶೇ.80ರಷ್ಟು ಪ್ರತಿಶತ ಕೃಷಿ ಪ್ರಧಾನ ದೇಶವಾಗಿದ್ದು ಕೃಷಿಯ ಜೊತೆಗೆ ಪಶುಪಾಲನೆ ಕೂಡ ಮಹತ್ವದಸ್ಥಾನ ಪಡೆದುಕೊಂಡಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸರ್ಕಾರಿ ಕಚೇರಿಗಳ ಸಮಯ ಬದಲಿಗೆ ಸಿಎಂಗೆ ಮನವಿ

 ತಾಲೂಕಿನ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆ ಮಾಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗುರುವಾರ ಶಿರಸ್ತೇದಾರ ಎ.ಎಚ್.ಬಳೂರಗಿ ಅವರಿಗೆ ಮನವಿ ಸಲ್ಲಿಸಿದರು.

ಪುರಸಭೆ: ₹3.20 ಲಕ್ಷ ಉಳಿತಾಯ ಬಜೆಟ್ ಮಂಡನೆ
ಕನ್ನಡಪ್ರಭ ವಾರ್ತೆ ಇಂಡಿ ಇಲ್ಲಿನ ಪುರಸಭೆಯ 2025–26ನೇ ಸಾಲಿನಲ್ಲಿ ಒಟ್ಟು ₹3.20 ಲಕ್ಷ ಉಳಿತಾಯ ಬಜೆಟ್ ಅನ್ನು ಗುರುವಾರ ಮಂಡನೆ ಮಾಡಲಾಯಿತು. ರಾಜಸ್ವ, ಬಂಡವಾಳ ಸ್ವೀಕೃತಿ, ಅಸಾಧಾರಣ ಸ್ವೀಕೃತಿ ಸೇರಿದಂತೆ ಒಟ್ಟು ₹44.30 ಕೋಟಿ ಆದಾಯ ಸಂಗ್ರಹವಾಗುವ ನಿರೀಕ್ಷೆ ಇದ್ದು, ಅದರಲ್ಲಿ ಒಟ್ಟು ₹44.27 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved