ನಿಡಗುಂದಿಯಲ್ಲಿ ಅಂಗಡಿಗಳ ತೆರವು ಕಾರ್ಯಾಚರಣೆಕನ್ನಡಪ್ರಭ ವಾರ್ತೆ ನಿಡಗುಂದಿ ನಿಡಗುಂದಿ ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿ ರಸ್ತೆ ಅತಿಕ್ರಮಣ ಮಾಡಿದ್ದ ಅಂಗಡಿಗಳನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು. ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡಿರುವ ಹೊಟೇಲ್, ಪಾನಶಾಪ್, ಗ್ಯಾರೇಜ್, ಕಿರಾಣಿ ಸೇರಿದಂತೆ ಹಲವಾರು ಅಂಗಡಿಗಳನ್ನು ತಹಸೀಲ್ದಾರ್ ಎ.ಡಿ ಅಮರವಾಡಗಿ ಹಾಗೂ ಪ.ಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಸಿಪಿಐ ಅಶೋಕ ಚವ್ಹಾಣ, ಪಿಎಸ್ಐ ಶಿವಾನಂದ ಪಾಟೀಲ ನೇತೃತ್ವದ ಅಧಿಕಾರಿಗಳ ತಂಡ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದರು