ಡಿಸಿ, ಎಸಿಗೆ ಧಮ್ಕಿ ಜಮೀರ್ ಹಾಕಿದ್ದಾನೆಕನ್ನಡಪ್ರಭ ವಾರ್ತೆ ವಿಜಯಪುರ: ಇಲ್ಲಿಗೆ ಜೆಪಿಸಿ ಚೇರ್ಮನ್ ಆಗಮಿಸುತ್ತಿದ್ದು, ಮಾಹಿತಿ ನೀಡಲು ತಯಾರಿ ಮಾಡಿಕೊಂಡಿದ್ದೇವೆ. ನ.7ರಂದು ಮಧ್ಯಾಹ್ನ 12 ಗಂಟೆಗೆ ಜೆಪಿಸಿ ಚೇರ್ಮನ್ ಬರ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ಡಿಸಿ ಕಚೇರಿ ಬಳಿ ನಡೆಯುತ್ತಿರುವ ಹೋರಾಟದ ವೇಳೆ ಮಾತನಾಡಿದ ಅವರು, ಜಮೀರ್ ಬಂದು ಹೋದ ಮೇಲೆ ದಿಢೀರ್ ಆಗಿ ರೈತರ ಜಮೀನಿನಲ್ಲಿ ವಕ್ಫ್ ಎಂದು ನೋಂದಣಿಯಾಗಿವೆ. ಜಮೀರ್ ಡಿಸಿ, ಎಸಿಗೆ ಧಮ್ಕಿ ಹಾಕಿದ್ದಾನೆ. ನನ್ನ ಸಿಎಂ ಕಳಿಸಿದ್ದಾರೆ ಎಂದು ಧಮ್ಕಿ ಹಾಕಿದ್ದಾನೆ ಎಂದು ಆಕ್ರೋಶ ಹೊರಹಾಕಿದರು.