• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓದು, ಬರಹದೊಂದಿಗೆ ಮನರಂಜನಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ
ನಗುವುದು ಸಹಜ ಧರ್ಮ, ನಗಿಸುವುದು ಪರಧರ್ಮ ಎಂಬ ಕವಿವಾಣಿಯಂತೆ ನಾವೆಲ್ಲ ಸದಾ ಉಲ್ಲಾಸದಿಂದರಬೇಕು. ನಾಳೆಯ ಚಿಂತೆಯಲ್ಲಿ ಇಂದಿನ ಸಂತೋಷ ಕಳೆದುಕೊಳ್ಳಬಾರದು ಎಂದು ಎಕ್ಸಲೆಂಟ್ ಸಂಸ್ಥೆಯ ನಿರ್ದೇಶಕಿ ಪುಷ್ಪಾ ಬಸವರಾಜ ಕೌಲಗಿ ಹೇಳಿದರು.
ನವೋದಯ ಸಾಹಿತ್ಯಕ್ಕೆ ಶ್ರೇಷ್ಠತೆ ತಂದುಕೊಟ್ಟ ಮಧುರ ಚೆನ್ನರ ಗೆಳೆಯರ ಬಳಗ
ಹಲಸಂಗಿಯ ಮಧುರ ಚೆನ್ನರ ಗೆಳೆಯರ ಬಳಗವು ನಗರದ ಮಣ್ಣಿನ ಸೊಗಡು, ಮಾನವೀಯತೆಗಾಗಿ ಮಿಡಿಯುವ ಹಾಗೂ ಸಾಮಾಜಿಕ ಕಾಳಜಿಯನ್ನು ಹೊಂದಿದ ಜಾನಪದ ಸಾಹಿತ್ಯವನ್ನು ನಾಡಿಗೆ ನೀಡಿರುವುದು ಸಾಹಿತ್ಯ ಕ್ಷೇತ್ರದಲ್ಲಿ ಬಹುದೊಡ್ಡ ಸಂಗತಿಯಾಗಿದೆ ಎಂದು ಸಾಹಿತಿ ಗುರುರಾಜ ಲೂತಿ ಹೇಳಿದರು.
ಬಡತನದಿಂಧ ಸಂಕಷ್ಟದಲ್ಲಿರುವ ಮಕ್ಕಳನ್ನು ಸಂರಕ್ಷಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಡತನ ಸೇರಿದಂತೆ ವಿವಿಧ ಕಾರಣಗಳಿಂದ ಸಂಕಷ್ಟದಲ್ಲಿರುವ ಮಕ್ಕಳನ್ನು ಗುರುತಿಸಿ ಸಂರಕ್ಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತಿಳಿಸಿದರು.
ಮನೆ ಕಳ್ಳತನ ಮಾಡಿದ್ದ ಕಳ್ಳನ ಬಂಧನ: ಬೈಕ್‌, ಚಿನ್ನಾಭರಣ ವಶ
ಸಿಂದಗಿ: ಸಿಂದಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮನೆಗಳ ಕಳ್ಳತನ ನಡೆಸಿದ್ದ ಕಳ್ಳನನ್ನು ಬಂಧಿಸುವಲ್ಲಿ ಸಿಂದಗಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ರಾಜನಕೂಳೂರು ಗ್ರಾಮದ ನಿಂಗಪ್ಪ ರಾಜಪ್ಪ ಬಡಿಗೇರ ಬಂಧಿತ ಕಳ್ಳನಾಗಿದ್ದು, ಈತ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣ ಸೇರಿದಂತೆ ತಾಲೂಕಿನ ಕೊಕಟನೂರು, ಸುಂಗಠಾಣ ಗ್ರಾಮಗಳಲ್ಲಿ ಮನೆಗಳ ಕಳ್ಳತನ ನಡೆಸಿದ್ದನು. ಅಲ್ಲದೇ, ವಿಚಾರಣೆ ವೇಳೆ ಕಳ್ಳತನ ಮಾಡಿದ್ದಾಗಿ ಆತನೇ ಒಪ್ಪಿಕೊಂಡಿದ್ದಾನೆ.
ಸಂಕಟಗಳ ಮಧ್ಯೆ ಸಾಧನೆ ತೋರಿದ ತನಿತೆಯರು
ಕನ್ನಡಪ್ರಭ ವಾರ್ತೆ ವಿಜಯಪುರ: ಒಬ್ಬರು ತಂದೆಯಿಲ್ಲದ ತಬ್ಬಲಿ, ಇನ್ನೊಬ್ಬರ ತಂದೆ ಕುರಿ ಕಾಯ್ತಾರೆ, ಮತ್ತೊಬ್ಬರ ತಂದೆ ಆಟೊಚಾಲಕ, ಮತ್ತೋರ್ವಳು ರೈತನ ಮಗಳು.. ಹೀಗೆ ಇವರ ಬಗ್ಗೆ ಹೇಳುತ್ತಿದ್ದರೆ ಪದಗಳು ಸಾಲೋದಿಲ್ಲ. ಯಾಕೆಂದರೆ ಸಾಕಷ್ಟು ಸಂಕಷ್ಟಗಳ ಮಧ್ಯೆಯೂ ಚಿನ್ನದ ಪದಕಗಳನ್ನು ಬೇಟೆಯಾಡುವ ಮೂಲಕ ಸಾಧನೆಗೈದಿದ್ದಾರೆ. ಈ ಬಾರಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವದಲ್ಲಿ ಮೂವರು ತಲಾ ಮೂರು ಚಿನ್ನದ ಪದಕಗಳನ್ನು ಪಡೆದು ಮಾದರಿಯಾಗಿದ್ದಾರೆ.
ಲೋಕಕಲ್ಯಾಣಾರ್ಥ ೨೧ ದಿನ ಮೌನಾನುಷ್ಠಾನ ಆರಂಭ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಇಂಗಳೇಶ್ವರ ರಸ್ತೆಯ ಗವಿ ತೋಟದಲ್ಲಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಲೋಕ ಕಲ್ಯಾಣ ಹಾಗೂ ಶರಣರ ಧರ್ಮ ಜಾಗೃತಿಗಾಗಿ ೨೧ ದಿನಗಳ ಕಾಲ ಮೌನ ಅನುಷ್ಠಾನವನ್ನು ಗುರುವಾರ ಕೈಗೊಂಡರು. ಇಂಗಳೇಶ್ವರದ ಬಸವೇಶ್ವರ ವಚನ ಶಿಲಾಮಂಟಪದ ರೂವಾರಿ, ವಿರಕ್ತಮಠದ ಹಿರಿಯ ಶ್ರೀಗಳಾದ ಚನ್ನಬಸವ ಮಹಾಸ್ವಾಮೀಜಿ ಪಾದ ಪೂಜೆ ಮಾಡಿದ ನಂತರ ಸಿದ್ದಲಿಂಗ ಸ್ವಾಮೀಜಿ ಮೌನ ಅನುಷ್ಠಾನ ಆರಂಭಿಸಿದರು.
ಬಸವೇಶ್ವರ ಬ್ಯಾಂಕ್‌ಗೆ ಅಗರವಾಲ ಅಧ್ಯಕ್ಷ, ಬಸವರಾಜ ಉಪಾಧ್ಯಕ್ಷ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಪ್ರತಿಷ್ಠಿತ ಬಸವೇಶ್ವರ ಕೋ ಅಪರೇಟಿವ್ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ಜರುಗಿದ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆಯಿತು. ನಾಮಪತ್ರ ಸಲ್ಲಿಕೆ ವೇಳೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷರಾಗಿ ಲೋಕನಾಥ ಅಗರವಾಲ, ಉಪಾಧ್ಯಕ್ಷರಾಗಿ ಬಸವರಾಜ ಗೊಳಸಂಗಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಎಸ್.ಎಂ.ಹಂಗರಗಿ ಘೋಷಣೆ ಮಾಡಿದರು. ಬಸವೇಶ್ವರ ಕೋ ಅಪರೇಟಿವ್ ಬ್ಯಾಂಕ್‌ಗೆ ಸತತವಾಗಿ 5ನೇ ಬಾರಿಗೆ ಅಧ್ಯಕ್ಷರಾಗಿ ಲೋಕನಾಥ ಅಗರವಾಲ, 2ನೇ ಬಾರಿಗೆ ಉಪಾಧ್ಯಕ್ಷರಾಗಿ ಬಸವರಾಜ ಗೊಳಸಂಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದರು.
ಇಂದು ಮಹಿಳಾ ವಿವಿಯ 16ನೇ ಘಟಿಕೋತ್ಸವ
ಕನ್ನಡಪ್ರಭ ವಾರ್ತೆ ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 16ನೇ ಘಟಿಕೋತ್ಸವನ್ನು ಜನೇವರಿ 9ರಂದು 12.30ಕ್ಕೆ ವಿವಿಯ ಜ್ಞಾನಶಕ್ತಿ ಆವರಣದ ಕ್ರೀಡಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ತಿಳಿಸಿದರು.
ಅರ್ಜುನ ಲಮಾಣಿ, ಹಣಮಂತ ಕೊಣದಿ ಪೆನಲ್‌ಗೆ ಜಯ
ಕನ್ನಡಪ್ರಭ ವಾರ್ತೆ ವಿಜಯಪುರ ಅವಳಿ ಜಿಲ್ಲೆಯ ಸರ್ಕಾರಿ ನೌಕರರು ವಿಶ್ವಾಸವಿಟ್ಟು, ಕೆಲಸ ಕಾರ್ಯಗಳ ಮೇಲೆ ಮತದಾನ ಮಾಡಿ ಇಡೀ ಪೆನೆಲ್‌ನ್ನು ಬಹುಮತದಿಂದ ಆಯ್ಕೆ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ಜಿಒಸಿಸಿ ಬ್ಯಾಂಕ್‌ನ ನೂತನ ನಿದೇರ್ಶಕ ಅರ್ಜುನ ಲಮಾಣಿ ಹೇಳಿದರು.
ಖರ್ಗೆಗೂ ಸಚಿನ್ ಸೂಸೈಡ್‌ ಕೇಸ್‌ಗೆ ಏನು ಸಂಬಂಧ?
ಕನ್ನಡಪ್ರಭ ವಾರ್ತೆ ಸಿಂದಗಿ: ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಬಗ್ಗೆ ಬಿಜೆಪಿ ಮುಖಂಡರು ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ರಾಜೀನಾಮೆಗಾಗಿ ಪ್ರತಿಭಟನೆ ನಡೆಸುತ್ತಿರುವುದು ಯಾವ ನ್ಯಾಯ. ಪ್ರಿಯಾಂಕ್‌ ಖರ್ಗೆಗೂ ಆತ್ಮಹತ್ಯೆ ಪ್ರಕರಣಕ್ಕೂ ಏನು ಸಂಬಂಧ ಎಂದು ರಾಜ್ಯ ಬಿಜೆಪಿ ನಾಯಕರು ಸಾಬೀತುಪಡಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved