ಸಾರಾಂಶ
ಕಲ್ಲಬೆಟ್ಟು ಗ್ರಾಮದ ಗಂಟಾಲ್ಕಟ್ಟೆ ಚರ್ಚ್ನಿಂದ ಕರಿಂಜೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕಿಸುವ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ವಾರ್ಡ್ ಸದಸ್ಯ ಸುರೇಶ್ ಕೋಟ್ಯಾನ್ ಮತ್ತು ಸ್ಥಳೀಯರು ಬುಧವಾರ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್ ಅವರಿಗೆ ಮನವಿ ನೀಡಿದರು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಕಲ್ಲಬೆಟ್ಟು ಗ್ರಾಮದ ಗಂಟಾಲ್ಕಟ್ಟೆ ಚರ್ಚ್ನಿಂದ ಕರಿಂಜೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕಿಸುವ ರಸ್ತೆ ತೀರಾ ಹದಗೆಟ್ಟಿದ್ದರಿಂದ ಸಾರ್ವಜನಿಕರು ಮತ್ತು ವಾಹನಗಳಿಗೆ ಸಂಚರಿಸಲು ಕಷ್ಟಸಾಧ್ಯವಾಗಿದೆ ಆದ್ದರಿಂದ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ವಾರ್ಡ್ ಸದಸ್ಯ ಸುರೇಶ್ ಕೋಟ್ಯಾನ್ ಮತ್ತು ಸ್ಥಳೀಯರು ಬುಧವಾರ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್ ಅವರಿಗೆ ಮನವಿ ನೀಡಿದರು.ರಸ್ತೆ ದುರಸ್ತಿಗೆ ಕೌನ್ಸಿಲ್ ಸಭೆಯಲ್ಲಿ ಹಲವು ಬಾರಿ ಮನವಿ ಸಲ್ಲಿಸಿದರೂ ಕೂಡ ದುರಸ್ತಿ ಕಾರ್ಯ ನಡೆದಿಲ್ಲ. ಇದರಿಂದ ಬೇಸತ್ತಿರುವ ಸಾರ್ವಜನಿಕರು ಧರಣಿ ಕೂಡಲು ಮುಂದಾಗಿದ್ದು, ತಾವು ಈ ಕೂಡಲೇ ರಸ್ತೆಯನ್ನು ದುರಸ್ತಿಪಡಿಸಿ ಆ ಭಾಗದ ಸಾರ್ವಜನಿಕರಿಗೆ ನ್ಯಾಯ ಒದಗಿಸಿ. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಆ ಭಾಗದಲ್ಲಿ ಸಂಚರಿಸುವ ಘನತ್ಯಾಜ್ಯ ವಾಹನಗಳನ್ನು ತಡೆಯುವ ಕೆಲಸವನ್ನು ಮಾಡಲು ಅಲ್ಲಿನ ನಾಗರಿಕರು ಮುಂದಾಗಿದ್ದು ಇದಕ್ಕೆ ಪುರಸಭೆಯ ಆಡಳಿತವು ಹೊಣೆಗಾರರಾಗಿರುತ್ತಾರೆ. ಅಲ್ಲದೆ ಮುಂದಿನ ದಿನದಲ್ಲಿ ಕಾಮಗಾರಿ ಮಾಡದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಪುರಸಭೆಯ ಎಲ್ಲಾ ವಾರ್ಡುಗಳ ಸದಸ್ಯರಿಗೂ ಅಭಿವೃದ್ಧಿ ಕಾಮಗಾರಿಗಳಿಗೆ ತಲಾ 20 ಲಕ್ಷದಂತೆ ಅನುದಾನ ಮೀಸಲಿರಿಸಲಾಗಿದೆ. ಅದರಂತೆ ಸುರೇಶ್ ಕೋಟ್ಯಾನ್ ಅವರ ವಾರ್ಡಿಗೂ ಮೀಸಲಿರಿಸಿ 10 ಲಕ್ಷ ರು. ಅನುದಾನ ಬಿಡುಗಡೆ ಮಾಡಲಾಗಿದೆ. ತುರ್ತಾಗಿ ಅಭಿವೃದ್ಧಿ ಆಗಬೇಕಾಗಿರುವ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅವಕಾಶವಿದೆ ಎಂದರು.ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಈ ಸಂದರ್ಭ ಹಾಜರಿದ್ದರು.