ಸಾರಾಂಶ
ಸಾಹಸಸಿಂಹ ವಿಷ್ಣುವರ್ಧನ್ ಅವರ ೭೪ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಸಾಲಗಾಮೆ ರಸ್ತೆಯ ಸರಸ್ವತಿ ದೇವಾಲಯ ವೃತ್ತದ ಬಳಿ ಇರುವ ವಿಷ್ಣುವರ್ಧನ್ ಪ್ರತಿಮೆಗೆ ವಿಷ್ಣು ಸೇನಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಯಿಂದ ಮಾಲಾರ್ಪಣೆ ಮಾಡಿ ಕೇಕ್ ಕತ್ತರಿಸಿ ಅನ್ನದಾನ ಮಾಡುವುದರ ಜೊತೆಗೆ ಅವರ ಚಲನಚಿತ್ರದ ಹಾಡುಗಳನ್ನು ಹಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಸಾಹಸ ಸಿಂಹ, ಕರ್ನಾಟಕ ಭಾರ್ಗವ ಹಾಗೂ ಹೆಸರಾದಂತಹ ನಾಯಕ ನಟ ವಿಷ್ಣುವರ್ಧನ್ ರವರ ೭೪ನೇ ವರ್ಷದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತೇನೆ. ಈ ದಿನ ಕರ್ನಾಟಕ ರಾಜ್ಯಾದ್ಯಂತ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಂತೇಶ್ ನೇತೃತ್ವದಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಮಧ್ಯಾಹ್ನ ೧೨ ಗಂಟೆಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಹಾಸನ
ಸಾಹಸಸಿಂಹ ವಿಷ್ಣುವರ್ಧನ್ ಅವರ ೭೪ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಸಾಲಗಾಮೆ ರಸ್ತೆಯ ಸರಸ್ವತಿ ದೇವಾಲಯ ವೃತ್ತದ ಬಳಿ ಇರುವ ವಿಷ್ಣುವರ್ಧನ್ ಪ್ರತಿಮೆಗೆ ವಿಷ್ಣು ಸೇನಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಯಿಂದ ಮಾಲಾರ್ಪಣೆ ಮಾಡಿ ಕೇಕ್ ಕತ್ತರಿಸಿ ಅನ್ನದಾನ ಮಾಡುವುದರ ಜೊತೆಗೆ ಅವರ ಚಲನಚಿತ್ರದ ಹಾಡುಗಳನ್ನು ಹಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ವಿಷ್ಣು ಸೇನಾ ಸಮಿತಿ ಜಿಲ್ಲಾಧ್ಯಕ್ಷ ಮಹಂತೇಶ್ ಮತ್ತು ಜೈಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್ ಮಾಧ್ಯಮದೊಂದಿಗೆ ಮಾತನಾಡಿ, ವಿಷ್ಣು ಅಭಿಮಾನಿಗಳು, ವಿವಿಧ ಸಂಘ ಸಂಸ್ಥೆಯವರು ಸೇರಿ ಸಾಹಸಸಿಂಹ ವಿಷ್ಣುವರ್ಧನ್ ಅವರ ೭೪ನೇ ವರ್ಷದ ಜನ್ಮದಿನವನ್ನು ಆಚರಿಸಲಾಗುತ್ತಿದೆ. ವಿಷ್ಣು ಅವರು ೨೦೦ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಅವರ ಕೊಡುಗೆ ಅಪಾರವಿದ್ದು, ಕರ್ನಾಟಕದಲ್ಲಿ ಡಾ. ರಾಜಕುಮಾರ್ ಅವರು ಬಿಟ್ಟರೇ ವಿಷ್ಣುವರ್ಧನ್ ಅವರು ಹೆಚ್ಚು ಚಲನಚಿತ್ರದಲ್ಲಿ ನಾಯಕ ನಟರಾಗಿ ನಟಿಸಿದ್ದಾರೆ ಎಂದರು. ಅವರ ಕುಟುಂಬಕ್ಕೆ ದೇವರು ಒಳ್ಳೆಯದನ್ನು ಮಾಡಲಿ. ವಿಷ್ಣುವರ್ಧನ್ ಅವರು ಎಲ್ಲಿಯೋ ಹೋಗಿಲ್ಲ, ಇಲ್ಲೇ ಇದ್ದಾರೆ. ಅವರ ಕಲೆ ಇನ್ನು ಜೀವಂತವಾಗಿದೆ. ವಿಷ್ಣುವರ್ಧನ್ ಕುರಿತು ಹಾಸನಾಂಬ ಕಲಾಕ್ಷೇತ್ರದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಎಲ್ಲಾ ಅಭಿಮಾನಿಗಳು ಬಂದು ಸಹಕರಿಸುವಂತೆ ಮನವಿ ಮಾಡಿದರು.ಸಾಹಸ ಸಿಂಹ, ಕರ್ನಾಟಕ ಭಾರ್ಗವ ಹಾಗೂ ಹೆಸರಾದಂತಹ ನಾಯಕ ನಟ ವಿಷ್ಣುವರ್ಧನ್ ರವರ ೭೪ನೇ ವರ್ಷದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತೇನೆ. ಈ ದಿನ ಕರ್ನಾಟಕ ರಾಜ್ಯಾದ್ಯಂತ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಂತೇಶ್ ನೇತೃತ್ವದಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಮಧ್ಯಾಹ್ನ ೧೨ ಗಂಟೆಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯ ಮತ್ತು ಕೇಂದ್ರ ಸರ್ಕಾರವು ವಿಷ್ಣುವರ್ಧನ್ ಅವರ ಸೇವೆ ಗುರುತಿಸುವಲ್ಲಿ ವಿಫಲವಾಗಿದೆ. ಇವತ್ತಿನವರೆಗೂ ವಿಷ್ಣು ಅವರಿಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಕೊಡದಿರುವುದು ಒಂದು ದುರದೃಷ್ಟಕರ ಸಂಗತಿ. ನಮ್ಮ ಜಿಲ್ಲಾಡಳಿತ ಮತ್ತು ನಮ್ಮ ಕರ್ನಾಟಕ ಸರ್ಕಾರ ವಿಷ್ಣುವರ್ಧನ್ ಮೇಲೆ ಅಭಿಮಾನ ಇದ್ದರೆ ಈ ವೃತ್ತಕ್ಕೆ ಇಲ್ಲವೇ ಯಾವುದಾದರೂ ರಸ್ತೆಗೆ ಅವರ ಹೆಸರನ್ನು ಇಡುವಂತೆ ಮನವಿ ಮಾಡಿದರು. ಇದೇ ವೇಳೆ ಕಲಾವಿದರ ಸಂಘದ ಅಧ್ಯಕ್ಷ ಕುಮಾರ್ ಅವರು ವಿಷ್ಣುವರ್ಧನ್ ನಟಿಸಿದ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಿ ಸಾರ್ವಜನಿಕರ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಯಲಗುಂದ ಶಾಂತಕುಮಾರ್, ಸಮಾಜ ಸೇವಕರಾದ ವಿಜಯಕುಮಾರ್, ತಮ್ಲಾಪುರ ಗಣೇಶ್, ಅಶ್ರು, ಗಾಯಕಿ ಅಂಜಲಿ, ನೀತು, ಅನ್ನಪೂರ್ಣ, ರಘು ವೆಂಕಟೇಶ್, ಪ್ರಕಾಶ್, ಮಂಜೂಳಾ, ಸಾವಿತ್ರಮ್ಮ, ಮಮತಾ, ಸಾವಿತ್ರಮ್ಮ ಇತರರು ಉಪಸ್ಥಿತರಿದ್ದರು.