ಸಾರಾಂಶ
ಭಾರತ ದೇಶದ ವಾಸ್ತುಶಿಲ್ಪದ ಕಲೆಗೆ ವಿಶ್ವಕರ್ಮ ಸಮಾಜ ಕೊಡುಗೆ ಅಪಾರವಾಗಿದೆ. ಭಾರತದ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ ಸಮಾಜ ಇಂದು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ತೀರಾ ಹಿಂದುಳಿದಿರುವುದು ದುರಂತ ಎಂದು ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ತಿಪ್ಪೇಶಾಚಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಚನ್ನಗಿರಿ
ಭಾರತ ದೇಶದ ವಾಸ್ತುಶಿಲ್ಪದ ಕಲೆಗೆ ವಿಶ್ವಕರ್ಮ ಸಮಾಜ ಕೊಡುಗೆ ಅಪಾರವಾಗಿದೆ. ಭಾರತದ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ ಸಮಾಜ ಇಂದು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ತೀರಾ ಹಿಂದುಳಿದಿರುವುದು ದುರಂತ ಎಂದು ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ತಿಪ್ಪೇಶಾಚಾರ್ ಹೇಳಿದರು.ಮಂಗಳವಾರ ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಿದ್ದ ವಿಶ್ವಕರ್ಮ ಜಯಂತ್ಯುತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ವಿಶ್ವಕರ್ಮ ಸಮಾಜ ಬಾಂಧವರು ಪ್ರಮುಖ 5 ಕಸಬುಗಳನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಸಮಾಜ ಸೂಕ್ತ ರೀತಿ ಸಂಘಟಿತವಾಗದ ಕಾರಣ ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಸಿಗುತ್ತಿಲ್ಲ. ಸಾಮಾಜಿಕ ನ್ಯಾಯವನ್ನು ನಮ್ಮನ್ನಾಳುವ ಸರ್ಕಾರದಿಂದ ಪಡೆಯಬೇಕಾದರೆ ಸಂಘಟಿತ ಹೋರಾಟ ಅನಿವಾರ್ಯ ಎಂದರು.
ಸಮಾಜದ ಗೌರವಾಧ್ಯಕ್ಷ ಎ.ಎಚ್. ಶಂಕರಾಚಾರ್ ಮಾತನಾಡಿ, ಜಗತ್ತಿಗೆ ಭಾರತ ದೇಶದ ಕಲೆ, ಸಂಸ್ಕೃತಿಯನ್ನು ಪರಿಚಯಿಸಿದ ವಿಶ್ವಕರ್ಮ ಸಮಾಜವು ಇಂದು ಯಾವುದೇ ಭದ್ರತೆಗಳಿಲ್ಲದೇ, ರಾಜಕಾರಣಿಗಳಿಂದ ನಿರ್ಲಕ್ಷಕ್ಕೆ ಒಳಗಾದ ಸಮಾಜವಾಗಿದೆ. ನಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು. ಆಗ ಮಾತ್ರ ಸಮಾಜದ ಪ್ರಗತಿ ಸಾಧ್ಯವಾಗಲಿದೆ. ಆದ್ದರಿಂದ ಪ್ರತಿಯೊಬ್ಬರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ಕೊಡಿಸಬೇಕು ಎಂದರು.ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಮಾಜದ ಪ್ರಮುಖರಾದ ನಾಗರಾಜಾಚಾರ್, ತಿಪ್ಪೇಶಪ್ಪ, ಶಂಕರಾಚಾರ್, ಸುಬ್ರಮಣ್ಯಾಚಾರ್, ಶ್ರೀನಿವಾಸಾಚಾರ್, ಕಾಲೇಜಿನ ಪ್ರಾಚಾರ್ಯ ಬಸವರಾಜಪ್ಪ, ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.
- - - -17ಕೆಸಿಎನ್ಜಿ2:ಚನ್ನಗಿರಿ ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ ತಾಲೂಕು ಆಡಳಿತ ವತಿಯಿಂದ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.