ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯ ಎಲ್ಲ ವಿಕಲಚೇತನರು ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಮ್ಮ ನಡೆ ಮತಗಟ್ಟೆ ಕಡೆ ಎಂಬ ಘೋಷವಾಕ್ಯದೊಂದಿಗೆ ವಿಶೇಷಚೇತನರಿಂದ ಹಮ್ಮಿಕೊಂಡ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚೆಗೆ ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ.ಮತದಾರರು ನಿರಾಶೆರಾಗಬಾರದು. ಉತ್ತಮ ನಾಗರಿಕನಾಗುವ ಜೊತೆಗೆ ಉತ್ತಮ ಮತದಾರರಬೇಕು. ಮೇ.7 ರಂದು ತಪ್ಪದೇ ಮತಗಟ್ಟೆಗೆ ತೆರಳಿ ಮತ ಚಲಾಯಿಸಲು ತಿಳಿಸಿದರು.
ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಿಮ್ಮ ಒಂದು ಮತ ಇಡೀ ದೇಶದ ಚಿತ್ರಣವನ್ನು ಬಲಿಸುತ್ತದೆ. ಸಂವಿಧಾನ ನಮಗೆ ಮತದಾದನ ಹಕ್ಕು ನೀಡಿದೆ. ಅದರಿಂದ ಯಾರೂ ವಂಚಿತರಾಗಬಾರದು. ಯಾವುದೇ ಆಸೆ - ಆಮಿಷಗಳಿಗೆ ಬಲಿಯಾಗದೇ ಸೂಕ್ತ ಅಭ್ಯರ್ಥಿಗೆ ಮತದಾನ ಮಾಡಿ. ಯಾವುದೇ ಒತ್ತಡಕ್ಕೆ ಒಳಗಾಗದೆ ತಪ್ಪದೆ ಮತದಾನ ಮಾಡಿ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಶೇ.100 ರಷ್ಟು ಮತದಾನ ಆಗಲಿ ಎಂದು ಜಾಗೃತಿ ಮೂಡಿಸಿದರು.ಮತದಾನದ ಪ್ರತಿಜ್ಞಾವಿಧಿ ಬೋಧಿಸಿದ ನಂತರ ಬೈಕ್ ರ್ಯಾಲಿ ನಡೆಯಿತು. ರ್ಯಾಲಿ ನಗರದ ಹಳೆಯ ತಹಸೀಲ್ದಾರ್ ಕಚೇರಿಯಿಂದ ಪ್ರಾರಂಭವಾಗಿ ಕೃಷ್ಣಾ ಟಾಕೀಸ್, ಮೀನು ಮಾರುಕಟ್ಟೆ, ಕೊತ್ತಲಪ್ಪನಗುಡಿ, ಪೊಲೀಸ್ ಚೌಕ್, ಬಳೆ ಬಸವೇಶ್ವರ ಬ್ಯಾಂಕ್, ಹಳೆ ಶಿರೂರ ಅಗಸಿ, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಕೊನೆ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು. ರ್ಯಾಲಿಯಲ್ಲಿ ಮತದಾನ ಜಾಗೃತಿ ಸಂದೇಶಗಳುಳ್ಳ ಟಿಶರ್ಟ್ ಮತ್ತು ಟೋಪಿ ಧರಿಸಿ ಎಲ್ಲರ ಗಮನ ಸೆಳೆದರು. ಪ್ರತಿಯೊಂದು ವಿಶೇಷ ಚೇತನರ ವಾಹನಗಳಿಗೆ ಮತದಾನ ಜಾಗೃತಿಯ ಘೋಷಣಾ ಫಲಕಗಳನ್ನು ಹಾಕಿಕೊಂಡಿದ್ದರು.
ಈ ವೇಳೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಸ್ವೀಲ್ ರಾಯಬಾರಿ, ಕ್ರೀಡಾಪಡು ಸಿದ್ದಾರೂಢ ಕೊಪ್ಪದ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಯೋಜನಾ ನಿರ್ದೇಶಕ ಶಶಿಕಾಂತ ಶಿವಪೂರೆ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಸೇರಿದಂತ ಆಯಾ ತಾಲೂಕಿನ ಎಂ.ಆರ್.ಡಬ್ಲೂಗಳು ಪಾಲ್ಗೊಂಡಿದ್ದರು.