ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಭಾನುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಭಾನುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಉದ್ಘಾಟಿಸಿ, ಮತಪತ್ರವು ಬುಲೆಟ್‌ಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಪ್ರತಿಯೊಬ್ಬ ಮತದಾರರು ತಮ್ಮ ಮತವನ್ನು ಚಲಾಯಿಸುವ ಮೂಲಕ ಹಕ್ಕನ್ನು ಚಲಾಯಿಸ ಬೇಕು ಎಂದರು.

ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಅನಿಲ ಭೂಮ ರೆಡ್ಡಿ ಮಾತನಾಡಿ, ಅತ್ಯಂತ ಕ್ಲಿಷ್ಟಕರ ಪ್ರದೇಶಗಳಲ್ಲಿಯೂ ಸಹ ಅಧಿಕಾರಿಗಳು ಮತದಾನದ ಮಹತ್ವದ ಬಗ್ಗೆ ಜಾಗೃತಿ ಮಾಡುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ, ಇತರರಿಗೂ ಮತದಾನದ ಅರಿವನ್ನು ಮೂಡಿಸಬೇಕು ಎಂದರು.ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬೈಬುನ್ನಿಸಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ದ.ಕ. ಡಿಡಿಪಿಯು ರಾಜೇಶ್ವರಿ, ಡಿಡಿಪಿಐ ಶಶಿಧರ್, ತಹಶೀಲ್ದಾರ್ ರಮೇಶ್ ಬಾಬು ಇದ್ದರು.

ಇದೇ ಸಂದರ್ಭ 18 ವರ್ಷ ಪೂರೈಸಿದ ವಿದ್ಯಾರ್ಥಿಗಳಿಗೆ ಮತದಾರ ಕಾರ್ಡ್‌ಗಳನ್ನು ವಿತರಿಸಲಾಯಿತು. ಚುನಾವಣಾ ಸಂದರ್ಭ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಬಿ.ಎಲ್ ಒ ಗಳನ್ನು ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.