ಸಾರಾಂಶ
ಕನ್ನಡಪ್ರಭ ವಾರ್ತೆ ಗೋಕಾಕ
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಭಾರತ ಜಾಗತಿಕ ಮಟ್ಟದಲ್ಲಿ ಬಲಾಢ್ಯವಾಗುತ್ತಿದೆ. ಅವರ ಸೇವೆಯು ನಮ್ಮ ದೇಶಕ್ಕೆ ಬೇಕಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಸೋಮವಾರ ಸಂಜೆ ಅರಭಾವಿ ಮಂಡಲ ಏರ್ಪಡಿಸಿದ್ದ ಬಿಎಲ್ಎ-2 ಕಾರ್ಯಾಗಾರ ಮತ್ತು ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಸಭೆ ಉದ್ಘಾಟಿಸಿ ಮಾತನಾಡಿದರು. ಅರಭಾವಿ ಕ್ಷೇತ್ರದ ಅರ್ಹ ಮತದಾರರನ್ನು ಗುರುತಿಸಿ ಶೀಘ್ರ ಮತದಾರರ ಯಾದಿಯನ್ನು ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಮತದಾರರ ಪರಿಷ್ಕರಣೆಯಿಂದ ಅರ್ಹರಿಗೆ ಮತ ಚಲಾಯಿಸುವ ಭಾಗ್ಯ ಬರುತ್ತದೆ, ಇನ್ನೊಂದೆಡೆ ಅನರ್ಹ ಮತದಾರರನ್ನು ಹೊರಗೆ ಕಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡುವಂತೆ ಸಲಹೆ ಮಾಡಿದರು. ಈಗಾಗಲೇ ನಮ್ಮ ಕ್ಷೇತ್ರದಲ್ಲಿ ಸುಮಾರು 281 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆ ಕೇಂದ್ರದಲ್ಲಿ ಯೋಗ್ಯವಿರುವ ಅರ್ಹ ಮತದಾರರನ್ನು ಗುರುತಿಸಬೇಕು. ಮೃತಪಟ್ಟವರ ಹೆಸರನ್ನು ತೆಗೆಸಬೇಕು. 18 ವರ್ಷ ಮೇಲ್ಪಟ್ಟವರನ್ನು ಮತದಾರ ಪಟ್ಟಿಯಲ್ಲಿ ಸೇರಿಸಬೇಕು. ಎರಡೆರಡು ಕಡೆಗಳಲ್ಲಿ ಮತ ಚಲಾಯಿಸುವವರನ್ನು ಪಟ್ಟಿಯಿಂದ ಕೈ ಬಿಡಲು ಅಧಿಕಾರಿಗಳಿಗೆ ತಿಳಿಸಬೇಕು ಎಂದು ಹೇಳಿದರು.ಜಿಲ್ಲಾ ಎಸ್ಐಆರ್ ಜಿಲ್ಲಾ ಪ್ರಭಾರಿ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಕಾಂಗ್ರೆಸ್ಸಿಗರೇ ಈ ದೇಶದಲ್ಲಿ ವೋಟ್ ಚೋರಿ ಮಾಡಿದ್ದಾರೆ. ಸಂವಿಧಾನಕ್ಕೆ ಅಪಚಾರ ತಂದಿದ್ದಾರೆ. ಅಂಬೇಡ್ಕರ್ರನ್ನು ಚುನಾವಣೆಯಲ್ಲಿ ಸೋಲಿಸಲು ನೆಹರೂ ಅವರು ಸಂಚು ರೂಪಿಸಿ, ಸಂವಿಧಾನ ಶಿಲ್ಪಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು.
ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಬಿಎಲ್ಎ-1 ಅರಭಾವಿ ಪ್ರಭಾರಿ ಗೋವಿಂದ ಕೊಪ್ಪದ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೊಲಕಾರ, ಪರಸಪ್ಪ ಬಬಲಿ ಮುಂತಾದವರು ಉಪಸ್ಥಿತರಿದ್ದರು.ಕೋಟ್ನಮ್ಮಿಂದ ಅಧಿಕಾರ ಪಡೆದವರು ಇಂದು ನಮಗೆ ಮೋಸ ಮಾಡುತ್ತಿದ್ದಾರೆ. ನಮ್ಮ ವಿರುದ್ಧ ಅಲ್ಲಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ನಾವು ಯಾರಿಗೂ, ಯಾವ ಸಮಾಜಕ್ಕೂ ಅನ್ಯಾಯ ಮಾಡಿಲ್ಲ. ನಮ್ಮ ಸಂಘಟನೆಯಿಂದ ಬೆಳೆದು, ಅಧಿಕಾರ ಅನುಭವಿಸಿದವರು ಈಗ ನಮಗೆ ವಿರೋಧಿಗಳಾಗಿದ್ದಾರೆ. ಮುಂದಿನ ದಿನಗಳಲ್ಲಿ ಅಂತಹವರಿಗೆ ತಕ್ಕ ಪಾಠ ಕಲಿಸುತ್ತೇನೆ. ಯಾರು, ಎಷ್ಟೇ ತಿಪ್ಪರಲಾಗ ಹಾಕಿದರೂ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನೇ ದಿಗ್ವಿಜಯ ಸಾಧಿಸುತ್ತೇನೆ. ಎಲ್ಲಿಯತನಕ ಜನರ ಪ್ರೀತಿ, ವಿಶ್ವಾಸ, ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ. ಬಾಲಚಂದ್ರ ಜಾರಕಿಹೊಳಿ, ಶಾಸಕರು.
;Resize=(128,128))
;Resize=(128,128))
;Resize=(128,128))
;Resize=(128,128))