ಒಗ್ಗಟ್ಟಿನಿಂದ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ

| Published : Mar 18 2024, 01:55 AM IST

ಒಗ್ಗಟ್ಟಿನಿಂದ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ
Share this Article
  • FB
  • TW
  • Linkdin
  • Email

ಸಾರಾಂಶ

ಅಥಣಿ: ಪ್ರತಿಯೊಬ್ಬರೂ ಕನ್ನಡ ಬೆಳೆಸುವ ಕೆಲಸ ಮಾಡಬೇಕು. ಕನ್ನಡ ಮನಸ್ಸುಗಳು ಒಗ್ಗಟ್ಟಿನಿಂದ ಗಡಿನಾಡಿನಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಸಮಾಜ ಸೇವಕ ಗಜಾನನ ಮಂಗಸೂಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿಪ್ರತಿಯೊಬ್ಬರೂ ಕನ್ನಡ ಬೆಳೆಸುವ ಕೆಲಸ ಮಾಡಬೇಕು. ಕನ್ನಡ ಮನಸ್ಸುಗಳು ಒಗ್ಗಟ್ಟಿನಿಂದ ಗಡಿನಾಡಿನಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಸಮಾಜ ಸೇವಕ ಗಜಾನನ ಮಂಗಸೂಳಿ ಹೇಳಿದರು.

ಅಥಣಿ ಪಟ್ಟಣದಲ್ಲಿ ಏ.6ರಂದು ಜರುಗಲಿರುವ ಗಡಿನಾಡು ಸಾಂಸ್ಕೃತಿಕ ಸಂಭ್ರಮದ ಬಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ ಕನ್ನಡ ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸವಿದೆ. ನಮ್ಮ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಗಡಿ, ನೆಲ, ಜಲ ಸಂರಕ್ಷಣೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ಚಮಕೇರಿಯ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಗಡಿನಾಡು ಸಂಸ್ಕೃತಿಕ ಉತ್ಸವ ಸಂಭ್ರಮಕ್ಕೆ ಹಿರಿಯ ಪತ್ರಕರ್ತ, ಸಾಹಿತಿ ಶಿವಪುತ್ರ ಯಾದವಾಡ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡಿರುವುದು ನಮ್ಮೆಲ್ಲರಿಗೆ ಖುಷಿ ತಂದಿದೆ. ಗಡಿಭಾಗದಲ್ಲಿ ಇಂತಹ ಅನೇಕ ಕನ್ನಡಪರ ಕಾರ್ಯಕ್ರಮಗಳು ಮೇಲಿಂದ ಮೇಲೆ ಜರುಗಲಿ ಎಂದರು.ಇದೇ ಸಂದರ್ಭದಲ್ಲಿ ಗಡಿನಾಡು ಕನ್ನಡ ಸಾಂಸ್ಕೃತಿಕ ಸಂಭ್ರಮದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಹಿರಿಯ ಪತ್ರಕರ್ತ ಸಾಹಿತಿ ಶಿವಪುತ್ರ ಯಾದವಾಡ ಅವರನ್ನು ಸನ್ಮಾನಿಸಿ ಆಹ್ವಾನ ನೀಡಲಾಯಿತು. ರಂಗಭೂಮಿ ಕಲಾವಿದ, ವಕೀಲ ಕೆ.ಎಲ್. ಕುಂದರಗಿ, ಸಾಹಿತಿ ಎಸ್.ಕೆ. ಹೊಳೆಪ್ಪನವರ, ಸಿದ್ದಾರ್ಥ ಸಿಂಗೆ, ಜಗನ್ನಾಥ ಭಾಮನೆ, ರೋಹಿಣಿ ಯಾದವಾಡ, ಡಾ.ಪ್ರಿಯವಂದ ಅನೆಪ್ಪನವರ, ಕವಿತಾ ಪಾಟೀಲ, ಪ್ರೇಮಾ ಪಾಟೀಲ, ಟ್ರಸ್ಟ್ ಅಧ್ಯಕ್ಷ ಮಹಾದೇವ ಬಿರಾದಾರ, ಕರವೇ ಅಧ್ಯಕ್ಷ ಅಣ್ಣಾಸಾಬ ತೆಲಸಂಗ, ಸಿದ್ದಾರ್ಥ ಸಿಂಗೆ ಸೇರಿದಂತೆ ಇತರರು ಉಪಸ್ಥಿತರಿದ್ದರು.