ಅನುಭವ ಮಂಟಪದ ರಥಯಾತ್ರೆಗೆ ಸ್ವಾಗತ

| Published : Apr 26 2025, 12:46 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವ ಜಯಂತಿ ಅಂಗವಾಗಿ ಬಸವಣ್ಣನವರ ಐಕ್ಯಸ್ಥಳ ಕೂಡಲಸಂಗಮದಲ್ಲಿ ಏ.೨೯ ಮತ್ತು ೩೦ ರಂದು ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ಅಂಗವಾಗಿ ೧೫ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ರಥಯಾತ್ರೆ ಬಸವ ಜನ್ಮಸ್ಥಳ ಬಸವನಬಾಗೇವಾಡಿಗೆ ಆಗಮಿಸಿದ್ದು, ಬಸವೇಶ್ವರ ವೃತ್ತದಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಬಸವ ಜಯಂತಿ ಅಂಗವಾಗಿ ಬಸವಣ್ಣನವರ ಐಕ್ಯಸ್ಥಳ ಕೂಡಲಸಂಗಮದಲ್ಲಿ ಏ.೨೯ ಮತ್ತು ೩೦ ರಂದು ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ಅಂಗವಾಗಿ ೧೫ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ರಥಯಾತ್ರೆ ಬಸವ ಜನ್ಮಸ್ಥಳ ಬಸವನಬಾಗೇವಾಡಿಗೆ ಆಗಮಿಸಿದ್ದು, ಬಸವೇಶ್ವರ ವೃತ್ತದಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು.ಈ ವೇಳೆ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿ ಬಸವೇಶ್ವರರ ನೇತೃತ್ವದಲ್ಲಿ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆ ಮೂಲಕ ಸಮಾನತೆ ಸಾರಲಾಯಿತು. ಅನುಭವ ಮಂಟಪ ಜಗತ್ತಿನ ಮೊದಲ ಸಂಸತ್ತು. ಇದು ಇಂದಿನ ಸಂಸತ್ತಿನ ಕಲ್ಪನೆಗೆ ನಾಂದಿಯಾಗಿದೆ. ಬಸವಾದಿ ಶರಣರ ಸಂದೇಶಗಳನ್ನು ಪ್ರಚಾರ ಮಾಡುತ್ತಿರುವುದು ಸ್ತುತ್ಯಾರ್ಹ ಎಂದರು.ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಮಾತನಾಡಿ, ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚಾರ ಪಡಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲಸಂಗಮದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ರಥಯಾತ್ರೆಗೆ ಏ.೧೭ರಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದರು. ಈ ರಥಯಾತ್ರೆ ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಬೀದರ, ಕಲಬುರಗಿ ಜಿಲ್ಲೆಗಳಲ್ಲಿ ಸಂಚರಿಸಿದ್ದು, ವಿಜಯಪುರದಿಂದ ಬೆಳಗಾವಿ ಜಿಲ್ಲೆಗೆ ತೆರಳಲಿದೆ ಎಂದರು.ಬಸವೇಶ್ವರ ಸೇವಾ ಸಮಿತಿ ಸದಸ್ಯ ಎಂ.ಜಿ.ಆದಿಗೊಂಡ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಚ್.ಯರಝರಿ, ಪುರಸಭೆ ವ್ಯವಸ್ಥಾಪಕ ಸುರೇಶ ಬಾಗೇವಾಡಿ, ಆರೋಗ್ಯ ನಿರೀಕ್ಷಕ ವಿಜಯಕುಮಾರ ವಂದಾಲ, ಮಂಜು ಹಳ್ಳೂರ, ತಾಪಂ ಸಿಬ್ಬಂದಿ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಡೋಣೂರ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಪುರಸಭೆ ಸದಸ್ಯ ನಜೀರ ಗಣಿ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ಮುಖಂಡರಾದ ಬಸವರಾಜ ಹಾರಿವಾಳ, ಸಂಗಮೇಶ ಓಲೇಕಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಮಳೆಯ ಮಧ್ಯೆಯೂ ರಥವನ್ನು ಭವ್ಯವಾಗಿ ಸ್ವಾಗತಿಸಲಾಯಿತು. ಶ್ರೀಗಳು, ಅಧಿಕಾರಿಗಳು, ಗಣ್ಯರು ಮಾಲಾರ್ಪಣೆ ಮಾಡಿದ್ದು, ರಥವನ್ನು ಬೀಳ್ಕೋಟ್ಟರು.