ಸಾರಾಂಶ
ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋದಲ್ಲಿ ಪೇತ್ರಿಯ ಅನ್ನಪೂರ್ಣ ನರ್ಸರಿ ಕೊಡ ಮಾಡಿದ ಗಿಡಗಳನ್ನು ನೆಡುವ ೨೫೯ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನ ಕಾರ್ಯಕ್ರಮ ನೆರವೇರಿತು.
ಕನ್ನಡಪ್ರಭ ವಾರ್ತೆ ಕುಂದಾಪುರ
ಕೋಟದ ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ, ಅವರ ಪರಿಸರ ಕಾಳಜಿ ಆಂದೋಲನ ಮನೆ ಮನಗಳನ್ನು ತಲುಪುತ್ತಿದೆ ಇದು ಅಭಿನಂದನೀಯ ಎಂದು ಶಿಕ್ಷಣ ತಜ್ಞ , ಯಕ್ಷಗುರು ಎಂ.ಎನ್. ಮಧ್ಯಸ್ಥ ಅಭಿಪ್ರಾಯಪಟ್ಟಿದ್ದಾರೆ.ಅವರು ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋದಲ್ಲಿ ಪೇತ್ರಿಯ ಅನ್ನಪೂರ್ಣ ನರ್ಸರಿ ಕೊಡ ಮಾಡಿದ ಗಿಡಗಳನ್ನು ನೆಡುವ ೨೫೯ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನ ಕಾರ್ಯಕ್ರಮದಲ್ಲಿ ಗಿಡ ವಿತರಿಸಿ ಮಾತನಾಡಿದರು.ಇದೇ ವೇಳೆ ಸ್ಥಳೀಯ ಗ್ರಾಮಸ್ಥರಿಗೆ ವಿವಿಧ ತರಹದ ತಳಿಗಳ ಗಿಡಗಳನ್ನು ವಿತರಿಸಲಾಯಿತು. ಅಲ್ಲದೆ ಕೋಟ, ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ೫೦ಕ್ಕೂ ಹೆಚ್ಚು ಅಶೋಕ ಗಿಡವನ್ನು ನಾಟಿ ಮಾಡಲಾಯಿತು.ಈ ಸಂದರ್ಭದಲ್ಲಿ ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಎಚ್ ಕುಂದರ್, ಉದ್ಯಮಿ ತೆಕ್ಕಟ್ಟೆ ಅನಂತ ನಾಯಕ್, ಕೋಟ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಅಧ್ಯಕ್ಷ ಎಂ.ಸುಬ್ರಾಯ ಆಚಾರ್, ಕೋಟ ಕಾಶೀಮಠದ ವೇ.ಮೂ ದೇವದತ್ತ ಭಟ್, ಟ್ರಾವೆಲಿಂಕ್ಸ್ ಫ್ರೆಂಡ್ಸ್ ಗೌರವಾಧ್ಯಕ್ಷ ನಾಗರಾಜ್ ಅಮೀನ್, ಹಿರಿಯ ಕೃಷಿಕರಾದ ರವಿ ಮಯ್ಯ, ರವೀಂದ್ರ ಶೆಟ್ಟಿ ದ್ಯಾವಸ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಸಿಇಒ ಹರ್ಷ ಪೂಜಾರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿ ನಿರೂಪಿಸಿದರು. ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು.