ನಕ್ಸಲರ ಬಂದೂಕುಗಳು ಏನಾದವು?: ಸರ್ಕಾರಕ್ಕೆ ಸುನಿಲ್‌ಕುಮಾರ್‌ ಪ್ರಶ್ನೆ

| Published : Jan 11 2025, 12:45 AM IST

ನಕ್ಸಲರ ಬಂದೂಕುಗಳು ಏನಾದವು?: ಸರ್ಕಾರಕ್ಕೆ ಸುನಿಲ್‌ಕುಮಾರ್‌ ಪ್ರಶ್ನೆ
Share this Article
  • FB
  • TW
  • Linkdin
  • Email

ಸಾರಾಂಶ

ನಕ್ಸಲ್ ಶರಣಾಗತಿ ವಿಚಾರದಲ್ಲಿ ಬಿಜೆಪಿ ಪಕ್ಷದ ಕಾರ್ಯದರ್ಶಿ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾರ್ಕಳ: ನಕ್ಸಲ್ ಶರಣಾಗತಿ ವಿಚಾರದಲ್ಲಿ ಬಿಜೆಪಿ ಪಕ್ಷದ ಕಾರ್ಯದರ್ಶಿ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.ನಕ್ಸಲ್ ಶರಣಾಗತಿ ವಿಚಾರದಲ್ಲಿ ಪ್ರಶ್ನೆಗಳಿವೆ, ಪ್ರಶ್ನಿಸುತ್ತೇವೆ. ಉತ್ತರಿಸಬೇಕಾದವರಿಗೆ ಉತ್ತರದಾಯಿತ್ವ ಇದೆ ಎಂದು ಭಾವಿಸಿದ್ದೇನೆ.

- ಮೊದಲನೆಯದಾಗಿ ಈ ನಕ್ಸಲ್ ಶರಣಾಗತಿ ಡ್ರಾಮಾ ಇಷ್ಟು ಕ್ಷಿಪ್ರವಾಗಿ ಅಂತ್ಯ ಕಂಡಿದ್ದು ಹೇಗೆ? ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ಸ್ವಯಂ ಪ್ರೇರಿತವಾಗಿ ಕೊಟ್ಟ ಕರೆಗೆ ನಕ್ಸಲರು ಇಷ್ಟು ವೇಗವಾಗಿ ಸ್ಪಂದಿಸುತ್ತಾರೆಂದರೆ ಇದೊಂದು ಪೂರ್ವ ಯೋಜಿತ ಸ್ಟೇಜ್ ಶೋ ಅಲ್ಲವೇ?

- ನಕ್ಸಲರೇನೋ ಶರಣಾದರು, ಆದರೆ ಅವರ ಬಳಿ ಇದ್ದ ಬಂದೂಕುಗಳು ಏನಾದವು? ಶರಣಾಗತಿ ಪ್ರಕ್ರಿಯೆ ಎಂದರೆ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಲ್ಲವೇ? ಇಲ್ಲೇಕೆ ಈ ನಿಯಮ ಪಾಲಿಸಿಲ್ಲ?- ಹಾಗಾದರೆ ಈ ಶಸ್ತ್ರಾಸ್ತ್ರಗಳನ್ನು ಯಾರಿಗೆ ನೀಡಲಾಗಿದೆ? ಬೇಕಾಬಿಟಿ ಕಾಡಿನಲ್ಲಿ ಎಸೆದು ಬರಲು ಸಾಧ್ಯವಿಲ್ಲ. ಹಾಗಾದರೆ ಯಾವ ನಗರ ನಕ್ಸಲರ ಮನೆಯಲ್ಲಿ ಈ ಬಂದೂಕನ್ನು ಗುಬ್ಬಿಗೂಡು ಕಟ್ಟುವುದಕ್ಕೆ ಇಟ್ಟಿದ್ದೀರಿ?- ನಕ್ಸಲ್ ವಿಕ್ರಮ್ ಗೌಡ ಎನ್‌ಕೌಂಟರ್ ಬಗ್ಗೆ ಈಗ ಅನುಮಾನ ಹೆಚ್ಚಿದೆ. ಆತ ಶರಣಾಗತಿ ಪ್ಯಾಕೇಜ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ. ಹೀಗಾಗಿ ಶರಣಾಗತಿ ಪ್ರಹಸನದ ರುವಾರಿಗಳೇ ವಿಕ್ರಮ್ ಗೌಡನ ಇರುವಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರಲೂಬಹುದಲ್ಲವೇ? ಹೀಗಾಗಿ ಈ ಬಗ್ಗೆ ತನಿಖೆ ಅನಿವಾರ್ಯ.-ಕರ್ನಾಟಕ ನಕ್ಸಲ್ ಚಳುವಳಿಯಿಂದ ಮುಕ್ತವಾಗಿದೆ ಎಂದು ಸರ್ಕಾರ ಯಾವ ಮಾನದಂಡದ ಆಧಾರದಿಂದ ಹೇಳುತ್ತಿದೆ? ಈ ಬಗ್ಗೆ ಎಎನ್‌ಎಫ್ ಕಮಾಂಡರ್ ಅಥವಾ ಪೊಲೀಸ್ ಮಹಾನಿರ್ದೇಶಕರು ಅಧಿಕೃತ ಘೋಷಣೆ ಮಾಡಬಲ್ಲರೇ?- ಅದೇ ರೀತಿ ಅರಣ್ಯದಂಚಿನ ನಿವಾಸಿಗಳ ಪುನರ್ವಸತಿಗೆ ರಾಜ್ಯ ಸರ್ಕಾರ ಇದುವರೆಗೆ ಎಷ್ಟು ಹಣ ಖರ್ಚು ಮಾಡಿದೆ ಎಂಬುದನ್ನೂ ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದಾರೆ.