ಸಾರಾಂಶ
ಕಳೆದ ಫೆ. 11ರಂದು ಸಾವನದುರ್ಗದ ಶ್ರೀ ವೀರಭದ್ರಸ್ವಾಮಿ ಜಾತ್ರೆಯ ರಥೋತ್ಸವ ಸಮಯದಲ್ಲಿ ಮಹಿಳೆ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನವಾಗಿತ್ತು.
ಮಾಗಡಿ:
ಸರಗಳ್ಳತನ ಮಾಡುತ್ತಿದ್ದ ಓರ್ವ ಮಹಿಳೆಯನ್ನು ಬಂಧಿಸಿರುವ ಮಾಗಡಿ ಪೊಲೀಸರು 5 ಲಕ್ಷ 40 ಸಾವಿರ ರು. ಮೌಲ್ಯದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.ಕಳೆದ ಫೆ. 11ರಂದು ಸಾವನದುರ್ಗದ ಶ್ರೀ ವೀರಭದ್ರಸ್ವಾಮಿ ಜಾತ್ರೆಯ ರಥೋತ್ಸವ ಸಮಯದಲ್ಲಿ ಮಹಿಳೆ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ದೂರಿನ ಮೇರೆಗೆ ಮಾಗಡಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಓರ್ವ ಮಹಿಳೆಯನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿ 5 ಲಕ್ಷ 40 ಸಾವಿರ ಮೌಲ್ಯದ 61 ಗ್ರಾಂ ತೂಕದ 2 ಚಿನ್ನದ ಸರ ವಶ ಪಡಿಸಿಕೊಂಡಿದ್ದಾರಲ್ಲದೆ, ಎರಡು ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.