ಸಾರಾಂಶ
ಅಂದು ಅನುಭವ ಮಂಟಪದ ಮೂಲಕ ಬಸವಣ್ಣವರು ಮಹಿಳೆಯರಿಗೆ ಪ್ರಾಧಾನ್ಯತೆ ಕಲ್ಪಿಸಿದ್ದರೆ, ಇಂದು ಮೋದಿ ಅವರು ಮಹಿಳಾ ಮೀಸಲಾತಿಯ ಮೂಲಕ ಮಹಿಳೆಯರಿಗೆ ಆದ್ಯತೆ ನೀಡಿದ್ದಾರೆ. ಹಾಗಾಗಿ ಅವರು ಆಧುನಿಕ ಬಸವಣ್ಣ ಎಂದರೆ ತಪ್ಪಾಗಲಾರದು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಗದಗ: ಅಂದು ಅನುಭವ ಮಂಟಪದ ಮೂಲಕ ಬಸವಣ್ಣವರು ಮಹಿಳೆಯರಿಗೆ ಪ್ರಾಧಾನ್ಯತೆ ಕಲ್ಪಿಸಿದ್ದರೆ, ಇಂದು ಮೋದಿ ಅವರು ಮಹಿಳಾ ಮೀಸಲಾತಿಯ ಮೂಲಕ ಮಹಿಳೆಯರಿಗೆ ಆದ್ಯತೆ ನೀಡಿದ್ದಾರೆ. ಹಾಗಾಗಿ ಅವರು ಆಧುನಿಕ ಬಸವಣ್ಣ ಎಂದರೆ ತಪ್ಪಾಗಲಾರದು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಅವರು ಶುಕ್ರವಾರ ಗದಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಂಬರುವ 2028ರ ಚುನಾವಣೆಗೆ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಕಾನೂನು ಕಡ್ಡಾಯ ಜಾರಿ ಆಗಲಿದೆ. ಈ ಕುರಿತು ಸಂಸತ್ನಲ್ಲಿ ಮಂಡಿಸಿದ ಮಸೂದೆಗೆ ಈಗಾಗಲೇ ಅನುಮೋದನೆ ಸಿಕ್ಕಿದೆ. 2028ರ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ಸಿಗಲಿವೆ ಎಂದರು.ಮಹಿಳಾ ಮೀಸಲಾತಿ ಜಾರಿ ಮಾಡುವ ಉದ್ದೇಶದಿಂದಲೇ ಕೇಂದ್ರ ಸರ್ಕಾರ ಜನಗಣತಿ ಮತ್ತು ಜಾತಿಗಣತಿ ಮಾಡಲು ನಿರ್ಧರಿಸಿದೆ. ಈ ಸಮಿತಿ ಆಧಾರದ ಮೇಲೆ 2028ರ ಚುನಾವಣೆಗೆ ಮಹಿಳಾ ಮೀಸಲಾತಿ ಸಿಗುತ್ತದೆ. ಸದ್ಯಕ್ಕೆ ಮಧ್ಯಂತರ ಚುನಾವಣೆ ನಡೆದರೆ ಈ ಕಾನೂನು ಅನ್ವಯಿಸುವುದಿಲ್ಲ. ಕ್ಷೇತ್ರ ಪುನರ್ ವಿಂಗಡನೆಗೂ ಮಹಿಳಾ ಮೀಸಲಾತಿಗೂ ಸಂಬಂಧವಿಲ್ಲ. ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರ ಪುನರ್ ವಿಂಗಡಣೆ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಸ್ಥಳೀಯ ಕ್ಷೇತ್ರಗಳ ಪುನರ್ ವಿಂಗಡಣೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ್ದಾಗಿದೆ. ಅದಕ್ಕಾಗಿ ಮಹಿಳೆಯರು ಗೊಂದಲಕ್ಕೆ ಒಳಗಾಗಬಾರದು ಎಂದರು.