ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಉಡುಪಿ ರೆಡ್ಕ್ರಾಸ್ ವತಿಯಿಂದ ವಿಶ್ವ ಮಾನವ ಹಕ್ಕು ದಿನಾಚರಣೆ ನೆರವೇರಿತು.
ಉಡುಪಿ: ಮಾನವ ಹಕ್ಕುಗಳ ಹೋರಾಟಕ್ಕೆ ಒಂದು ಇತಿಹಾಸವಿದೆ. ಜಗತ್ತಿನ ಪ್ರತಿಯೊಬ್ಬ ಮನುಷ್ಯನಿಗೆ ಗೌರವಯುತವಾಗಿ ಬದುಕುವ ಹಕ್ಕು ಇದೆ. ಇದನ್ನೇ ನಮ್ಮ ಸಂವಿಧಾನದ ತತ್ವಗಳು ಪ್ರತಿಪಾದಿಸುತ್ತದೆ. ಈ ದೃಷ್ಟಿಯಿಂದ ಮಾನವ ಹಕ್ಕುಗಳ ಕುರಿತಾಗಿ ಅರಿವು ಮೂಡಿಸುವುದು ಅತಿ ಅಗತ್ಯ ಎಂದು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ್ ನೀಲಾವರ ಹೇಳಿದ್ದಾರೆ.
ಅವರು ಕಾಲೇಜಿನಲ್ಲಿ ಉಡುಪಿ ರೆಡ್ಕ್ರಾಸ್ ವತಿಯಿಂದ ನಡೆದ ವಿಶ್ವ ಮಾನವ ಹಕ್ಕು ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡುತ್ತಿದ್ದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಅವರು ರೆಡ್ ಕ್ರಾಸ್ ಸಂಸ್ಥೆಯ ಚಟುವಟಿಕೆಗಳು ಮಾನವ ಹಕ್ಕುಗಳ ಹೋರಾಟದ ಒಂದು ಭಾಗ ಎಂದು ಹೇಳಿದರು.ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಸ್ತಾವಿಕವಾಗಿ ಮಾತಾನಾಡಿ ಕಾರ್ಯಕ್ರಮದ ಮಹತ್ವ ವಿವರಿಸಿರು. ಪ್ರಾಂಶುಪಾಲ ಡಾ. ಗೋಪಾಲಕೃಷ್ಣ ಎಮ್. ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು.
ರೆಡ್ ಕ್ರಾಸ್ ಸ್ವಯಂಸೇವಕಿಯರು ಪ್ರಾರ್ಥಿಸಿದರು. ಅಕ್ಷತಾ ಸ್ವಾಗತಿಸಿದರು. ರೆಡ್ ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಟಿ ಚಂದ್ರಶೇಖರ್ ಐಕ್ಯುಎಸಿ ಸಂಚಾಲಕಿ ರೋಶನಿ ಯಶವಂತ್ ರೆಡ್ ಕ್ರಾಸ್ ಸಂಚಾಲಕ ಡಾ. ರಾಘವ ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ಶಫಾ ವಂದಿಸಿದರೆ, ಮನೀಷ ಕಾರ್ಯಕ್ರಮ ನಿರೂಪಿಸಿದರು.