ಕಾಡಾ ಕಚೇರಿಯ ಹೊಲಗಾಲುವೆಯ ಹಸನಾಪುರ ಕಚೇರಿಯನ್ನು ವರ್ತಿಗೆ ಸ್ಥಳಾಂತರಿಸುವುದನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಹಾಗೂ ಸಾಮೂಹಿಕ ನಾಯಕತ್ವ ತಾಲೂಕು ಸಮಿತಿ ನೇತೃತ್ವದಲ್ಲಿ ಹಸನಾಪುರ ಕಚೇರಿ ಮುಂದೆ ಪ್ರತಿಭಟಿಸಿ ಆಡಳಿತಾಧಿಕಾರಿಗೆ ಮನವಿ ಸಲ್ಲಿಸಲಾಯಿತು.