ಕೋಲಿ ಸಮಾಜದ ಬೃಹತ್ ಪ್ರತಿಭಟನೆಕೋಲಿ, ಕಬ್ಬಲಿಗ ಸಮಾಜ ಮತ್ತು ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಹಾಗೂ ಕಲಬುರಗಿ ಹೈಕೋರ್ಟ್ ಪೀಠದ ಆದೇಶದಂತೆಯೇ ನಾಯ್ಕ್, ವಾಲ್ಮೀಕಿ, ಬೇಡ, ಬೇಡರ ಜಾತಿಗಳನ್ನು ಅನುಸೂಚಿತ ಬುಡಕಟ್ಟು ಪಟ್ಟಿಯಿಂದ ಕೈಬಿಡಬೇಕು ಎಂಬುದು ಸೇರಿದಂತೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಮಾಜದ ವಿವಿಧ ಮಠಾಧೀಶರು ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರ ನೇತೃತ್ವದಲ್ಲಿ ಜಿಲ್ಲಾ ಕೋಲಿ - ಕಬ್ಬಲಿಗ ಸಮಾಜವು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.