ಆ.15ರಂದು ಸಚಿವ ದರ್ಶನಾಪುರಗೆ ಘೇರಾವ್ ಎಚ್ಚರಿಕೆಪಿಎಸ್ಐ ಪರಶುರಾಮ್ ಶಂಕಾಸ್ಪದ ಸಾವಿನ ಪ್ರಕರಣದ ಆರೋಪಿಗಳಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹಾಗೂ ಪುತ್ರ ಸನ್ನೀಗೌಡ ಅವರನ್ನು ಬಂಧಿಸದಿದ್ದರೆ ಆ.15 ರಂದು ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಧ್ವಜಾರೋಹಣಕ್ಕೆಂದು ಆಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ-ಪ್ರಗತಿಪರ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿವೆ.