ನೊಂದ ಸಂತ್ರಸ್ತರಿಗೆ ಪರಿಹಾರ ವಿತರಿಸಿ: ಡಾ. ಸುಶೀಲಾಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ದೌರ್ಜನ್ಯ ನಡೆಯುವಂತಹ ಗ್ರಾಮಗಳ ಪಟ್ಟಿಯನ್ನು ಇಟ್ಟುಕೊಂಡು ತಕ್ಷಣ ಕಾಲಕಾಲಕ್ಕೆ ಭೇಟಿ ನೀಡಿ ಅಲ್ಲಿ ಸೂಕ್ತ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಅಸ್ಪೃಶ್ಯತೆ ಆಚರಣೆ ಜಾರಿಯಲ್ಲಿ ಇರುವಂತಹ ಹಳ್ಳಿಗಳಲ್ಲಿ ಅಸ್ಪೃಶ್ಯತಾ ನಿವಾರಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.