ರೈತ ನಾಯಕ, ಜನಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 55 ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಮೇ 2ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ನೆರವೇರಿತು.
ಬೆಳ್ತಂಗಡಿ: ರೈತ ನಾಯಕ, ಜನಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 55 ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಮೇ 2ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಪೋಸ್ಟರ್ ಬಿಡುಗಡೆ ಮಾಡಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಮನ್ ಕೀ ಬಾತ್ ಪ್ರಮುಖ್ ಸೀತಾರಾಮ್ ಬೆಳಾಲು, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಹಾಗೂ ಪಕ್ಷದ ಜವಾಬ್ದಾರಿಯ ಪ್ರಮುಖರು ಉಪಸ್ಥಿತರಿದ್ದರು.