ಉಡುಪಿ ಯಕ್ಷಗಾನ ಕಲಾರಂಗದ ಯಕ್ಷನಿಧಿ ಡೈರಿ ಬಿಡುಗಡೆ

| Published : Jan 03 2025, 12:30 AM IST

ಸಾರಾಂಶ

ಯಕ್ಷಗಾನ ಕಲಾರಂಗವು ಪ್ರತಿವರ್ಷ ಯಕ್ಷನಿಧಿ ಸದಸ್ಯ ಕಲಾವಿದರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ ಡೈರಿ ಪ್ರಕಟಿಸುತ್ತಿದ್ದು, ೨೦೨೫ರ ಯಕ್ಷನಿಧಿ ಡೈರಿಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಯಕ್ಷಗಾನ ಕಲಾರಂಗವು ಪ್ರತಿವರ್ಷ ಯಕ್ಷನಿಧಿ ಸದಸ್ಯ ಕಲಾವಿದರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ ಡೈರಿ ಪ್ರಕಟಿಸುತ್ತಿದ್ದು, ೨೦೨೫ರ ಯಕ್ಷನಿಧಿ ಡೈರಿಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಧರ್ಮಸ್ಥಳ ಮೇಳದ ಕಲಾವಿದ ಧರ್ಮಸ್ಥಳ ಚಂದ್ರಶೇಖರ ಮತ್ತು ಕಮಲಶಿಲೆ ಮೇಳದ ಕಲಾವಿದ ನಾರಾಯಣ ಉಳ್ಳೂರ ಅವರಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ವಿದ್ಯಾಪೋಷಕ್‌ಗೆ ಪರ್ಯಾಯ ಮಠದ ವತಿಯಿಂದ ೧೦ ಲಕ್ಷ ರುಪಾಯಿ ಕೊಡುಗೆಯನ್ನು ನೀಡಲಾಯಿತು.ಪರ್ಯಾಯ ಮಠದ ಅಪೂರ್ವ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದಲ್ಲಿ ವಿದ್ಯಾಪೋಷಕ್‌ನ ೫೦೦ ವಿದ್ಯಾರ್ಥಿಗಳು ಭಾಗವಹಿಸಿದ್ದನ್ನು ಕಾರ್ಯದರ್ಶಿ ಮುರಲಿ ಕಡೆಕಾರ್ ಕೃತಜ್ಞತೆಯಿಂದ ಸ್ಮರಿಸಿಕೊಂಡರು.ಶ್ರೀ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಕಲಾರಂಗದ ಉಪಾಧ್ಯಕ್ಷ ಎಸ್.ವಿ. ಭಟ್, ವಿ.ಜಿ. ಶೆಟ್ಟಿ, ಸದಸ್ಯರಾದ ಯು.ವಿಶ್ವನಾಥ ಶೆಣೈ, ಭುವನಪ್ರಸಾದ ಹೆಗ್ಡೆ, ನಾರಾಯಣ ಎಂ. ಹೆಗಡೆ, ದಾನಿಗಳಾದ ವಿಲಾಸಿನಿ ಬಿ. ಶೆಣೈ ಉಪಸ್ಥಿತರಿದ್ದರು.