ಯಕ್ಷಾವಾಸ್ಯಮ್ ಕಾರಿಂಜ ಪಂಚಮ ವಾರ್ಷಿಕೋತ್ಸವ: ಕುರಿಯ ಭಾಗವತರಿಗೆ ಪ್ರಶಸ್ತಿ

| Published : Oct 29 2025, 11:15 PM IST

ಯಕ್ಷಾವಾಸ್ಯಮ್ ಕಾರಿಂಜ ಪಂಚಮ ವಾರ್ಷಿಕೋತ್ಸವ: ಕುರಿಯ ಭಾಗವತರಿಗೆ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಈ ಸಾಲಿನ ಯಕ್ಷಾವಾಸ್ಯಮ್ ಪ್ರಶಸ್ತಿಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಅವರಿಗೆ ನ.೧ರಂದು ಪ್ರದಾನ ಮಾಡಲಾಗುವುದು ಎಂದು ಯಕ್ಷಾವಾಸ್ಯಮ್ ಸಂಸ್ಥಾಪಕಿ ಸಾಯಿಸುಮಾ ಎಂ.ನಾವಡ ತಿಳಿಸಿದ್ದಾರೆ.

ಬಂಟ್ವಾಳ: ಯಕ್ಷಾವಾಸ್ಯಮ್ ಕಾರಿಂಜದ ಪಂಚಮ ವಾರ್ಷಿಕೋತ್ಸವ ವಗ್ಗದ ಕಾಡಬೆಟ್ಟು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನ.1ರಂದು ನಡೆಯಲಿದೆ. ಯಕ್ಷಾವಾಸ್ಯಮ್ ಪ್ರಶಸ್ತಿಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಅವರಿಗೆ ನೀಡಲಾಗುವುದು ಎಂದು ಯಕ್ಷಾವಾಸ್ಯಮ್ ಸಂಸ್ಥಾಪಕಿ ಸಾಯಿಸುಮಾ ಎಂ.ನಾವಡ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 10ಕ್ಕೆ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು, ಮಂಜಪ್ಪ ನಾಯ್ಕ, ಬೊಮ್ಮಿ, ಶಾರದಾ ಜಿ. ಬಂಗೇರ, ಲೋಕಯ್ಯ ಗೌಡ ಹಾಗೂ ವಾಸುದೇವ ಪ್ರಭು ಅವರಿಗೆ ಯಕ್ಷಾವಾಸ್ಯಮ್ ಗೌರವ ಸನ್ಮಾನ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಭಾ ಕಾರ್ಯಕ್ರಮ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವೈದ್ಯ ಹಾಗೂ ಕಲಾವಿದ ಡಾ. ಭಾಸ್ಕರಾನಂದ ಕುಮಾರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದರು.

ಬೆಳಗ್ಗೆ 11ಕ್ಕೆ ಪೂರ್ವರಂಗ ಹಾಗೂ ಶ್ರೀಕೃಷ್ಣಲೀಲೆ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸಂಜೆ 4.30ಕ್ಕೆ ಯಕ್ಷಗಾನ ಪ್ರದರ್ಶನ ಶ್ರೀದೇವಿ ಮಹಾತ್ಮೆ ವಿದ್ಯಾರ್ಥಿಗಳಿಂದ ಪ್ರಸ್ತುತಿಗೊಳ್ಳಲಿದೆ ಎಂದವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಾರ್ಷಿಕೋತ್ಸವ ಸಮಿತಿ ಉಪಾಧ್ಯಕ್ಷ ದೇವದಾಸ್ ಶೆಟ್ಟಿ ಬಂಟ್ವಾಳ, ಲತಾ ಆರ್. ಮಾಣಿಬೆಟ್ಟು, ಜೊತೆ ಕಾರ್ಯದರ್ಶಿ ಸುಮನಾ ಯಳಚಿತ್ತಾಯ ಉಪಸ್ಥಿತರಿದ್ದರು.