ಸಾರಾಂಶ
ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಷಿಪ್ನಲ್ಲಿ ಕಂಚಿನ ಪದಕ ವಿಜೇತ ಮಲ್ಪೆಯ ಮಾನ್ಸಿ ಜೆ. ಸುವರ್ಣ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಷಿಪ್ನಲ್ಲಿ ಕಂಚಿನ ಪದಕ ವಿಜೇತ ಮಲ್ಪೆಯ ಮಾನ್ಸಿ ಜೆ. ಸುವರ್ಣ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಮಲ್ಪೆಯ ಜಗದೀಶ್ ಸುವರ್ಣ ಮತ್ತು ಮಾಲತಿ ದಂಪತಿಯ ಸುಪುತ್ರಿ ಮಾನ್ಸಿ ಜೆ ಸುವರ್ಣ ರಾಷ್ಟ್ರಮಟ್ಟದ ಬಾಕ್ಸಿಂಗ್ ಚಾಂಪಿಯನ್ ಶಿಪ್ ರಾಜ್ಯದ ಪ್ರತಿನಿಧಿಯಾಗಿ ಕಂಚಿನ ಪದಕ ಗೆಲ್ಲುವ ಮೂಲಕ ಕರ್ನಾಟಕ ರಾಜ್ಯ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಮಾನ್ಸಿ ಜೆ. ಸುವರ್ಣ ಅವರ ಈ ಸಾಧನೆ ರಾಜ್ಯದ ಇತರ ಬಾಕ್ಸರ್ ಗಳಿಗೆ ಪ್ರೇರಣೆ ನೀಡಲಿದ್ದು, ಮುಂಬರುವ ದಿನಗಳಲ್ಲಿ ಬಾಕ್ಸಿಂಗ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶಕ್ಕೆ ಗೌರವ ತರುವಂತಾಗಲಿ ಎಂದು ಯಶ್ ಪಾಲ್ ಸುವರ್ಣ ಶುಭ ಹಾರೈಸಿದ್ದಾರೆ.ಮಾನ್ಸಿ ಜೆ. ಸುವರ್ಣ ಸಾಧನೆಗೆ ಹೆಬ್ಬಾಳ್ಕರ್ ಶ್ಲಾಘನೆಉತ್ತರಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಉಡುಪಿ ಜಿಲ್ಲೆಯ ಮಾನ್ಸಿ ಜೆ. ಸುವರ್ಣ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅವರ ಈ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ ಮಾಲತಿ-ಜಗದೀಶ್ ಸುವರ್ಣ ದಂಪತಿ ಪುತ್ರಿ ಮಾನ್ಸಿ ಗೆದ್ದಿರುವ ಕಂಚಿನ ಪದಕ ರಾಜ್ಯದ ಇತರ ಬಾಕ್ಸರ್ಗಳಿಗೆ ಸ್ಫೂರ್ತಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಾಕ್ಸಿಂಗ್ ಕ್ರೀಡೆ ವಿರಳ. ಈ ಕ್ರೀಡೆ ಮತ್ತಷ್ಟು ಬೆಳೆಯಲಿ. ಕರಾವಳಿಯ ಮಕ್ಕಳು ಬಾಕ್ಸಿಂಗ್ನಲ್ಲಿ ಮಿಂಚಲಿ ಎಂದು ಸಚಿವೆ ಪ್ರಕಟಣೆಯಲ್ಲಿ ಹಾರೈಸಿದ್ದಾರೆ.