ಸಾರಾಂಶ
ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗ ನಮ್ಮ ಜೀವನದ ಒಂದು ಭಾಗ ಎಂದು ಪರಿಗಣಿಸಿ ಪ್ರತಿದಿನದ ಕೆಲಸ ಪ್ರಾರಂಭವಾಗುವ ಮೊದಲು ಬೆಳಗಿನ ಜಾವ ಅರ್ಧ ಗಂಟೆಯನ್ನು ಯೋಗಕ್ಕೆ ಮೀಸಲಿಡಬೇಕು. ಯೋಗ ಮಾಡುವುದರಿಂದ ಬೇರೆ ಎಲ್ಲಾ ಕಾರ್ಯ ಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತದೆ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಬಲಿಷ್ಠ ದೇಹ ಹಾಗೂ ಉತ್ತಮ ಆರೋಗ್ಯಕ್ಕಾಗಿ ನಿತ್ಯ ಯೋಗ ಅಭ್ಯಾಸವನ್ನು ಆಳವಡಿಸಿಕೊಳ್ಳಬೇಕು ಎಂದು ಸೆಸ್ಕ್ ಅಧ್ಯಕ್ಷ ಹಾಗೂ ಶಾಶಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.ಪಟ್ಟಣದ ದರಿಯಾ ದೌಲತ್ ಬಾಗ್ನ ಉದ್ಯಾನವನದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯೋಗಾಭ್ಯಾಸಕ್ಕೆ ಚಾಲನೆ ನೀಡಿ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗ ನಮ್ಮ ಜೀವನದ ಒಂದು ಭಾಗ ಎಂದು ಪರಿಗಣಿಸಿ ಪ್ರತಿದಿನದ ಕೆಲಸ ಪ್ರಾರಂಭವಾಗುವ ಮೊದಲು ಬೆಳಗಿನ ಜಾವ ಅರ್ಧ ಗಂಟೆಯನ್ನು ಯೋಗಕ್ಕೆ ಮೀಸಲಿಡಬೇಕು. ಯೋಗ ಮಾಡುವುದರಿಂದ ಬೇರೆ ಎಲ್ಲಾ ಕಾರ್ಯ ಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತದೆ. ಇದನ್ನು ಹಲವು ಮಹಾನ್ ವ್ಯಕ್ತಿಗಳು ಅನುಸರಿಸಿ ಮಾರ್ಗದರ್ಶನ ನೀಡಿದ್ದಾರೆ ಎಂದರು.
ನಂತರ ತಹಸೀಲ್ದಾರ್ ಪರುಶುರಾಮ್ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಯೋಗಭ್ಯಾಸಕ್ಕೆ ಹೆಚ್ಚಿನ ಮನ್ನಣೆ ದೊರೆತ್ತಿದೆ. ಯೋಗದಿಂದ ಭಾರತ ವಿಶ್ವದಲ್ಲಿ ಮೊದಲ ಗುರುವಾಗಿದೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಪ್ರತಿಯೊಂದಕ್ಕೂ ತಮ್ಮದೆ ಆದ ಗೌರವ ಹೆಚ್ಚಿಸಲು ಈ ಯೋಗವು ಸಹ ಇಲ್ಲಿನ ಸಂಸ್ಕೃತಿಯ ಪ್ರತಿಬಿಂಬವಾಗಿರಲು ವಿಶ್ವದಲ್ಲಿ ಮೆಚ್ಚುಗೆಗೆ ಯೋಗವು ಕಾರಣವಾಗಿದೆ ಎಂದರು.ಈ ವೇಳೆ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಮಾರುತಿ, ಪಿಯು ಕಾಲೇಜಿನ ಪ್ರಾಂಶುಪಾಲ ಜಯಶಂಕರ್, ಸಿಪಿಐ ಬಿ.ಜಿ. ಕುಮಾರ್ ಸೇರಿದಂತೆ ಭಾರತೀಯ ಪುರಾತತ್ವ ಇಲಾಖಾ ಕಚೇರಿ ಅಧಿಕಾರಿ ಸಿಬ್ಬಂದಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಯೋಗದಲ್ಲಿ ಭಾಗವಹಿಸಿದ್ದರು.