ಹೆದ್ದಾರಿ ಬದಿ ಕಬ್ಬಿಣದ ಜಾಲರಿಗೆ ಕಾರು ಡಿಕ್ಕಿ: ಯುವಕ ಸಾವು

| Published : Oct 04 2025, 12:00 AM IST

ಹೆದ್ದಾರಿ ಬದಿ ಕಬ್ಬಿಣದ ಜಾಲರಿಗೆ ಕಾರು ಡಿಕ್ಕಿ: ಯುವಕ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಕಾರನ್ನು ಅತಿವೇಗವಾಗಿ ಚಾಲನೆ ಮಾಡುತ್ತಿದ್ದ ಪವನ್ ಇಂಡುವಾಳು ಸಮೀಪ ಬರುತ್ತಿದ್ದಂತೆ .150ರ ಸಮಯದಲ್ಲಿ ಕಾರಿನ ನಿಯಂತ್ರಣ ಕಳೆದುಕೊಂಡ ಚಾಲಕ ಪವನ್ ಸರ್ವಿಸ್ ರಸ್ತೆಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಜಾಲರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅತಿವೇಗವಾಗಿ ಸಾಗುತ್ತಿದ್ದ ಕಾರು ಸರ್ವಿಸ್ ರಸ್ತೆಬದಿಗೆ ಹಾಕಲಾಗಿರುವ ಕಬ್ಬಿಣದ ಜಾಲರಿಗೆ ಡಿಕ್ಕಿಯಾಗಿ ಉರುಳಿಬಿದ್ದ ಪರಿಣಾಮ ಯುವಕ ಮೃತಪಟ್ಟು, ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಇಂಡುವಾಳು ಸಮೀಪ ನಡೆದಿದೆ.ಘಟನೆಯಲ್ಲಿ ಬೆಂಗಳೂರಿನ ಚಿನ್ನಣ್ಣ ಲೇಔಟ್‌ನ ನಿವಾಸಿ ಲೇ. ಸುರೇಂದ್ರ ಪ್ರಕಾಶ್ ಅವರ ಪುತ್ರ ತುಷಾರ್ ಪ್ರಕಾಶ್ (20) ಮೃತ ಯುವಕ. ಕಾರಿನ ಚಾಲಕ ಪವನ್ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಅ. 1ರ ಬುಧವಾರ ತಡರಾತ್ರಿ ದಸರಾ ನೋಡಲೆಂದು ಮೃತ ತುಷಾರ್ ಪ್ರಕಾಶ್ ಹಾಗೂ ಪವನ್ ಬೆಂಗಳೂರಿನಿಂದ ಕಾರಿನಲ್ಲಿ ಹೊರಟಿದ್ದಾರೆ. ಕಾರನ್ನು ಅತಿವೇಗವಾಗಿ ಚಾಲನೆ ಮಾಡುತ್ತಿದ್ದ ಪವನ್ ಇಂಡುವಾಳು ಸಮೀಪ ಬರುತ್ತಿದ್ದಂತೆ .150ರ ಸಮಯದಲ್ಲಿ ಕಾರಿನ ನಿಯಂತ್ರಣ ಕಳೆದುಕೊಂಡ ಚಾಲಕ ಪವನ್ ಸರ್ವಿಸ್ ರಸ್ತೆಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಜಾಲರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ಘಟನೆಯಿಂದಾಗಿ ತುಷಾರ್ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟರೆ, ಚಾಲಕ ಪವನ್ ತೀವ್ರವಾಗಿ ಗಾಯಗೊಂಡಿದ್ದಾನೆ. ಕಾರು ಹೆದ್ದಾರಿಯಲ್ಲೇ ಉರುಳಿಬಿದ್ದ ಪರಿಣಾಮ ಕೆಲ ಸಮಯ ಸಂಚಾರದಲ್ಲಿ ಅಸ್ತವ್ಯಸ್ತವಾಯಿತು.ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು, ಮೃತ ಯುವ ತುಷಾರ್ ಪ್ರಕಾಶ್ ಮೃತ ದೇಹ ಹಾಗೂ ತೀವ್ರವಾಗಿ ಗಾಯಗೊಂಡಿದ್ದ ಪವನ್‌ನನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಗಾಯಾಳು ಪವನ್‌ಗೆ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ.