ಗುಂಡ್ಲುಪೇಟೆ: ತಾಲೂಕಿನ ಕೂತನೂರು ಗ್ರಾಮದ ಲಕ್ಷ್ಮಣ ಎಂಬ ಯುವಕ ಜಿಂಕೆ ಬೇಟೆಯಾಡಿ ಜಿಂಕೆ ತಲೆ, ಮೂರು ಕಾಲುಗಳ ಸಮೇತ ಸಿಕ್ಕಿ ಬಿದ್ದಿರುವ ಹಿನ್ನೆಲೆ ಗುಂಡ್ಲುಪೇಟೆ ಜೆಎಂಎಫ್ಸಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿ ಲಕ್ಷ್ಮಣನನ್ನು ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಾಧಿಕಾರಿ ಶಿವಕುಮಾರ್ ಹಾಗೂ ಸಿಬ್ಬಂದಿ ವಿಚಾರಣೆ ನಡೆಸಿದಾಗ ಜಿಂಕೆಯನ್ನು ನಾನು ಬೇಟೆಯಾಡಿಲ್ಲ. ತಾಲೂಕಿನ ಭೀಮನಬೀಡು ಗ್ರಾಮದ ಮತ್ತೋರ್ವ ಯುವಕ ಜಿಂಕೆ ಬೇಟೆಯಾಡಿ ನನಗೆ ಮಾಂಸ ಕೊಟ್ಟಿದ್ದು ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಧಿಕಾರಿ ಶಿವಕುಮಾರ್ ಆರೋಪಿ ಲಕ್ಷ್ಮಣನನ್ನು ಗುಂಡ್ಲುಪೇಟೆ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಿಂಕೆ ಬೇಟೆಯಾಡಿದ ಯುವಕನಿಗೆ ನ್ಯಾಯಾಂಗ ಬಂಧನ
ಆರೋಪಿ ಲಕ್ಷ್ಮಣನನ್ನು ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಾಧಿಕಾರಿ ಶಿವಕುಮಾರ್ ಹಾಗೂ ಸಿಬ್ಬಂದಿ ವಿಚಾರಣೆ ನಡೆಸಿದಾಗ ಜಿಂಕೆಯನ್ನು ನಾನು ಬೇಟೆಯಾಡಿಲ್ಲ. ತಾಲೂಕಿನ ಭೀಮನಬೀಡು ಗ್ರಾಮದ ಮತ್ತೋರ್ವ ಯುವಕ ಜಿಂಕೆ ಬೇಟೆಯಾಡಿ ನನಗೆ ಮಾಂಸ ಕೊಟ್ಟಿದ್ದು ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.