ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ಕುರೇರ್

| Published : Aug 01 2025, 02:15 AM IST

ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ಕುರೇರ್
Share this Article
  • FB
  • TW
  • Linkdin
  • Email

ಸಾರಾಂಶ

ಬಾಗಲಕೋಟೆ ಜಿಲ್ಲೆಯ ಬೀಳಗಿ ಹಾಗೂ ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ ನಡೆದ ಕುಡಿಯುವ ನೀರಿನ ಕಾಮಗಾರಿಗಳನ್ನು ಜಿಪಂ ಸಿಇಒ ಶಶಿಧರ ಕುರೇರ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಬೀಳಗಿ ಹಾಗೂ ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ ನಡೆದ ಕುಡಿಯುವ ನೀರಿನ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.

ಬೀಳಗಿ ತಾಲೂಕಿನ ಸುನಗ ಮತ್ತು ಸುನಗ ತಾಂಡಾ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿದ ಅವರು ಮನೆ ಮನೆಗೆ ಅಳವಡಿಸಲಾಗಿರುವ ನಲ್ಲಿಗಳ ಸಂಪರ್ಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು. ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿರುವ ಕುರಿತು ಮಾಹಿತಿ ಪಡೆದುಕೊಂಡು ದಿನ 24 ಗಂಟೆಗಳ ನೀರಿನ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಗ್ಗೂರ ಆರ್.ಸಿ ಮತ್ತು ಗೋವಿನದಿನ್ನಿ ಆರ್.ಸಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದಲ್ಲಿ ಜಲಮೂಲಗಳು ಉತ್ತಮವಾಗಿದ್ದು, ಜನರ ಆರೋಗ್ಯದ ಮೇಲೆ ನೀರು ನಿರ್ವಹಣೆ ಮುಖ್ಯ ಪಾತ್ರ ವಹಿಸುತ್ತಿರುವ ಕಾರಣ ನೀರಿನ ಸಂಪರ್ಕಗಳನ್ನು ಕಾಲಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದರು. ನಾಗರಾಳ ತಾಂಡಾ ಮತ್ತು ತೆಗ್ಗಿ ಗ್ರಾಮಕ್ಕೆ ಭೇಟಿ ನೀಡಿ, ಯೋಜನೆಯಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸುವ ಮೂಲಕ ಗ್ರಾಮದಲ್ಲಿ ದುರಸ್ತಿಗಳನ್ನು ಕೈಗೊಳ್ಳಲು ಸೂಚಿಸಿದರು.

ಅಮಲಝರಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿರುವ ಉತ್ತಮ ನೀರಿನ ವ್ಯವಸ್ಥೆ ಮತ್ತು ಸಾರ್ವಜನಿಕರ ಸಹಭಾಗಿತ್ವದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ನಿರಂತರ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುಲು ತಿಳಿಸಿದರು. ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಗೊಂಡಿರುವ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸುವ ಮೂಲಕ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ ಜಾರಿಗೆ ತರುವಂತೆ ಸೂಚಿಸಿದರು.

ಹಸ್ತಾಂತರಗೊಂಡ ಗ್ರಾಮಗಳನ್ನು ಪಂಚಾಯಿತಿಯಿಂದ ನಿರ್ವಹಣೆ, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಮೂಲಭೂತ ಕಾರ್ಯಗಳಲ್ಲಿ ಒಂದಾಗಿದ್ದು, ಕಾಲಕಾಲಕ್ಕೆ ಜಲಮೂಲ, ಜಲಸಂಗ್ರಹ ಹಾಗೂ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನೀಡಲಾಗಿರುವ ಫೀಲ್ಡ್ ಟೆಸ್ಟ್ ಕಿಟ್ ಬಳಸಿಕೊಂಡು ನೀರಿನ ಶದ್ದತೆಯನ್ನು ಪರೀಕ್ಷಿಸಲು ಸೂಚಿಸಿದರು. ಗ್ರಾಮ ನೀರು ನೈರ್ಮಲ್ಯ ಸಮಿತಿ ಕ್ರಿಯಾತ್ಮಕವಾಗಿರುವಂತೆ ಸಭೆಗಳನ್ನು ನಡೆಸಿ ಪರಿಹಾರವನ್ನು ಒದಗಿಸುವಂತೆ ತಿಳಿಸಿದರು.

ಭೇಟಿ ಸಮಯದಲ್ಲಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಆಕಾಶ್, ಪ್ರಬಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್.ಕೆ.ಡಂಬಳ ಸೇರಿದಂತೆ ಶಾಖಾಧಿಕಾರಿಗಳು, ಪಂಚಾಯತಿ ಅಭಿವೃಧ್ದಿ ಅಧಿಕಾರಿಗಳು, ಗ್ರಾಮದ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.