ಬಿಜೆಪಿ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ : ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿಯ ಕೇಸರಿವನದಲ್ಲಿ ಕಾರ್ಯಕ್ರಮ

| Published : Dec 08 2024, 01:15 AM IST / Updated: Dec 08 2024, 05:29 AM IST

ಬಿಜೆಪಿ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ : ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿಯ ಕೇಸರಿವನದಲ್ಲಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿಯ ಕೇಸರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಸರಘಟ್ಟ ಹೋಬಳಿ ಬಿಜೆಪಿ ನೂತನ ಪದಾಧಿಕಾರಿಗಳಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಪಕ್ಷದ ಹುದ್ದೆಯ ಪ್ರಮಾಣಪತ್ರ ವಿತರಿಸಿದರು.

 ಯಲಹಂಕ : ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿಯ ಕೇಸರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಸರಘಟ್ಟ ಹೋಬಳಿ ಬಿಜೆಪಿ ನೂತನ ಪದಾಧಿಕಾರಿಗಳಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಪಕ್ಷದ ಹುದ್ದೆಯ ಪ್ರಮಾಣಪತ್ರ ವಿತರಿಸಿದರು.

ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷದ ಸಂಘಟನೆಯನ್ನು ಹೆಚ್ಚು ಬಲಪಡಿಸುವ ದಿಸೆಯಲ್ಲಿ ಹೆಸರಘಟ್ಟ ಹೋಬಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು, ನೂತನ ಪದಾಧಿಕಾರಿಗಳಿಗೆ ಇಂದು ಹುದ್ದೆಯ ಪ್ರಮಾಣಪತ್ರ ವಿತರಿಸಲಾಗಿದೆ. 

ಪಕ್ಷದ ಹುದ್ದೆಯ ಜವಾಬ್ದಾರಿ ಪಡೆದಿರುವ ನೂತನ ಪದಾಧಿಕಾರಿಗಳು ಪಕ್ಷ ಸಂಘಟನೆಯ ಮಹತ್ವದ ಗುರಿಯೊಂದಿಗೆ ಪ್ರಮಾಣಿಕವಾಗಿ ಕಾರ್ಯನಿರ್ವಹಿಸ ಬೇಕು ಎಂದು ಸಲಹೆ ನೀಡಿದರು. ಬಿಜೆಪಿ ಹಿರಿಯ ಮುಖಂಡ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ರೈತಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಹೆಸರಘಟ್ಟ ಹೋಬಳಿ ಬಿಜೆಪಿ ಅಧ್ಯಕ್ಷ ವಸಂತ್ ಅರಕೆರೆ, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ಕೆ.ಎಂ.ಶಿವಮಾದಪ್ಪ (ಕೆಂಪಾಪುರ), ಉಪಾಧ್ಯಕ್ಷ ಪಿ.ಕೆ.ರಾಜಣ್ಣ, ಇಟಗಲ್‌ಪುರ ಮೋಹನ್, ಕುಮಾರ್, ಹರೀಶ್ ಮೈಲಪ್ಪನಹಳ್ಳಿ, ಶ್ರೀಜಿತ್, ಕಾರ್ಯದರ್ಶಿ ಆರ್.ಶಿವಾನಂದ,ಶಶಿಕುಮಾರ್, ಹರೀಶ್, ಹನುಮಂತ ರಾಜು, ಅಶೋಕ್ ಶಿವಕೋಟೆ, ಶೇಖರ್ ಹೆಚ್.ಎಸ್.,ಅರುಣ್ ಕುಮಾರ್ ಇದ್ದರು.