ಸಾರಾಂಶ
ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿದದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರ ಬಂದು ಬಂಧಮುಕ್ತರಾದರು.
ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿದದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರ ಬಂದು ಬಂಧಮುಕ್ತರಾದರು. ಅವರನ್ನು ಎಎಪಿ ನಾಯಕರು ಮತ್ತು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಜ್ರಿವಾಲ್, ಸರ್ವಾಧಿಕಾರಿಗಳಿಂದ ದೇಶವನ್ನು ರಕ್ಷಿಸಬೇಕಿದೆ. ನನಗೆ ಜಾಮೀನು ನೀಡಿದ ಸುಪ್ರಿಂ ಕೋರ್ಟ್ಗೆ, ನ್ಯಾಯಾಧೀಶರಿಗೆ ಧನ್ಯವಾದಗಳು ಎಂದರು.
‘ನಾನು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿದ್ದೇನೆ ಎಂದು ನಿಮಗೆ ಹೇಳಿದ್ದೆ. ಅದರಂತೆ ನಾನು ಹೊರ ಬಂದಿದ್ದೇನೆ. ಶನಿವಾರ ನಾನು ಹನುಮನ ದೇಗುಲಕ್ಕೆ ಭೇಟಿ ನೀಡಲಿದ್ದೇನೆ. ನನ್ನ ಜೊತೆ ನೀವು ದೇಗುಲಕ್ಕೆ ಬರಬೇಕು’ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.
ದೇಗುಲ ದರ್ಶನದ ನಂತರ ಎಎಪಿ ಕಚೇರಿಯಲ್ಲಿ ಮಧ್ಯಾಹ್ 1 ಗಂಟೆಗೆ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿದೆ,