ಸಾರಾಂಶ
‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಕನಕಪುರ: ‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಡಿಕೆಶಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾದಪ್ಪನ ಆಣೆಯಾಗಿಯೂ ಹೇಳುವೆ, 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂದರು.
ಕುಮಾರಸ್ವಾಮಿ ಅವರು ಕಳೆದ ಬಾರಿ ನಾವೇ ಸರ್ಕಾರ ರಚನೆ ಮಾಡ್ತೇವೆ ಅಂತ ಹೇಳಿದ್ದರು. ಆದರೆ, ಕಾಂಗ್ರೆಸ್ ಪಕ್ಷ 140 ಸ್ಥಾನ ಪಡೆದು ಸರ್ಕಾರ ರಚನೆ ಮಾಡಿದೆ. ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆ ಕೊಡುವುದಿಲ್ಲ ಅಂದ್ರು, ಈಗ ನಾವು ಕೊಡ್ತಾ ಇಲ್ವಾ?. ಸರ್ಕಾರ ನಡೆಸಲ್ಲ ಅಂದ್ರು, ಈಗ ಸರ್ಕಾರ ನಡೆಸ್ತಾ ಇಲ್ವಾ?.
ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿರುವುದರಿಂದ ಜನ ನಮಗೆ ಒಳ್ಳೆಯ ತೀರ್ಪು ಕೊಡ್ತಿದ್ದಾರೆ. ಮುಂದೆ ಇನ್ನೂ ಹೆಚ್ಚಿನ ಸ್ಥಾನಗಳನ್ನು ಗೆದ್ದು, ನಮ್ಮ ನಾಯಕ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೆ ಸರ್ಕಾರ ರಚನೆ ಮಾಡುತ್ತೇವೆ. ಮಾದಪ್ಪನ ಆಣೆಯಾಗೂ ಡಿಕೆಶಿ ಸಿಎಂ ಆಗಲಿದ್ದಾರೆ ಎಂದರು.