ಸಾರಾಂಶ
ಕೂಟದಲ್ಲಿ 13 ವಿಭಾಗಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು
ಚಾಮರಾಜನಗರ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ತಾಲೂಕಿನ ವೆಂಕಟಯ್ಯನಛತ್ರ ಕಾಲೇಜಿನ ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ವಿಜೇತರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.ಕ್ರೀಡಾಕೂಟದ 13 ವಿಭಾಗಗಳಲ್ಲಿ ಸ್ಪರ್ಧಿಗಳು ವಿಜೇತರಾಗಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ 800 ಮೀ ಓಟದಲ್ಲಿ ಪ್ರಥಮ, 400 ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಯೋಗೇಶ 3000 ಮೀ ಓಟದಲ್ಲಿ ಪ್ರಥಮ, ಜಯಲಕ್ಷ್ಮಿ 1500 ಮೀ ಓಟದಲ್ಲಿ ಪ್ರಥಮ, ನದಿಯಾ 5000 ಮೀ ಓಟದಲ್ಲಿ ಪ್ರಥಮ, ಶಿವು 3000 ಮೀ ಓಟದಲ್ಲಿ ದ್ವಿತೀಯ, ರಾಧಿಕಾ 3000 ಮೀ ಓಟದಲ್ಲಿ ದ್ವಿತೀಯ, ರವೀಂದ್ರ ವೇಗ ನಡಿಗೆಯಲ್ಲಿ ದ್ವಿತೀಯ, ಶೈಲಜ 100 ಮೀ ಓಟದಲ್ಲಿ ದ್ವಿತೀಯ, ಗೌರಮ್ಮ 800 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ಕಬಡ್ಡಿಯಲ್ಲಿ ತೇಜಸ್, ಯೋಗೇಶ, ಖೋ ಖೋದಲ್ಲಿ ಶೈಲಜ ಮತ್ತು ಗೌರಮ್ಮ ಸಹ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಎಸ್. ನಾಗೇಶ ಅವರು ವಿಜಯಶಾಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೋರಿದ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದ ಪ್ರಾಂಶುಪಾಲರು, ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮತ್ತಷ್ಟು ಸಾಧನೆ ತೋರಿ ಜಿಲ್ಲೆಗೆ ಹಾಗೂ ಕಾಲೇಜಿಗೆ ಹೆಚ್ಚಿನ ಕೀರ್ತಿ ತರಬೇಕು. ಕ್ರೀಡಾಪ್ರೀತಿಯನ್ನು ವಿದ್ಯಾರ್ಥಿಗಳು ಕಾಪಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ವಿದ್ಯಾರ್ಥಿಗಳ ಸಾಧನೆ ಹಾಗೂ ತರಬೇತಿಗೆ ಮಾರ್ಗದರ್ಶನ ನೀಡಿದ ಭೂಗೋಳ ಶಾಸ್ತ್ರ ಉಪನ್ಯಾಸಕ ಮಹಾಂತೇಶ ಕುರುಬರ ಪ್ರೋತ್ಸಾಹ ಹಾಗೂ ಶ್ರಮವನ್ನು ಪ್ರಾಂಶುಪಾಲರು ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಮಲ್ಲೇಶ, ಪ್ರಶಾಂತ.ಎಸ್, ಮಹೇಶ್.ಆರ್. ಪೂರ್ಣಿಮಾ.ಎ, ಅನಿತಾ.ಜೆ, ಗೋವಿಂದ.ವಿ, ಶೀಲಾವತಿ.ಎಸ್. ಮಹಾಂತೇಶ ಕುರುಬರ ಇತರರು ಉಪಸ್ಥಿತರಿದ್ದರು.
-----8ಸಿಎಚ್ಎನ್54
ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಪ್ರಶಸ್ತಿ ಪಡೆದ ತಾಲೂಕಿನ ವೆಂಕಟಯ್ಯನ ಛತ್ರ ಕಾಲೇಜಿನ ವಿದ್ಯಾರ್ಥಿಗಳು.