ಸಿಎಂ ಆಗಲು ಖರ್ಗೆ, ಪರಂ ಇನ್ನೆಷ್ಟು ದಿನ ಕಾಯ್ಬೇಕು: ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

| Published : Dec 08 2024, 12:19 PM IST

Chalavadi Narayana Swamy
ಸಿಎಂ ಆಗಲು ಖರ್ಗೆ, ಪರಂ ಇನ್ನೆಷ್ಟು ದಿನ ಕಾಯ್ಬೇಕು: ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಲು ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ, ಜಿ. ಪರಮೇಶ್ವರ್‌ ಅವರು ಇನ್ನೆಷ್ಟು ದಿನ ಕಾಯಬೇಕು ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ಚಿಂತಾಮಣಿ: ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಲು ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ, ಜಿ. ಪರಮೇಶ್ವರ್‌ ಅವರು ಇನ್ನೆಷ್ಟು ದಿನ ಕಾಯಬೇಕು ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. 

ಸಿಎಂ ಮಾಡುವಂತೆ ಪಕ್ಷದ ಮೇಲೆ ಒತ್ತಡ ಹೇರುವ ತಾಕತ್ತು ಇಲ್ಲವೆಂದಾದರೆ ಗುಲಾಮಗಿರಿಯಲ್ಲಿ ಏಕಿದ್ದೀರಿ, ರಾಜಕೀಯ ಸನ್ಯಾಸತ್ವ ಸ್ವೀಕರಿಸಿ ಎಂದು ಹೇಳಿದ್ದಾರೆ.