ಸಾರಾಂಶ
ನಟಿ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಯ ತಾರಾ ಪ್ರಚಾರಕಿಯಾಗಿರುವ ಖುಷ್ಬೂ ಸುಂದರ್ ತಮಗೆ ಅನಾರೋಗ್ಯವುಂಟಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಗೈರಾಗುವುದಾಗಿ ತಿಳಿಸಿದ್ದಾರೆ.
ಚೆನ್ನೈ: ನಟಿ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಯ ತಾರಾ ಪ್ರಚಾರಕಿಯಾಗಿರುವ ಖುಷ್ಬೂ ಸುಂದರ್ ತಮಗೆ ಅನಾರೋಗ್ಯವುಂಟಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಗೈರಾಗುವುದಾಗಿ ತಿಳಿಸಿದ್ದಾರೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಪತ್ರ ಬರೆದಿದ್ದು, ‘ನನಗೆ 2019ರಲ್ಲಿ ಮೂಳೆ ಮುರಿದಿದ್ದು, ಕಳೆದ ಐದು ವರ್ಷಗಳಿಂದಲೂ ಆ ಕುರಿತು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಅದರೆ ಚುನಾವಣಾ ಪ್ರಚಾರದಲ್ಲಿ ಹೆಚ್ಚು ಪ್ರಯಾಣ, ಕುಳಿತಿರುವಿಕೆ ಅತ್ಯಗತ್ಯ ಆಗಿರುವುದರಿಂದ ಮತ್ತೆ ನನಗೆ ಮೂಳೆ ಮುರಿತ ಬಾಧಿಸಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಅಲ್ಪ ವಿರಾಮ ಘೋಷಿಸುತ್ತಿದ್ದೇನೆ’ ಎಂದು ವಿನಂತಿಸಿದ್ದಾರೆ.ಖುಷ್ಬೂ ಕೇವಲ ಬಾಲಿವುಡ್ ಅಲ್ಲದೆ ಕನ್ನಡ, ತಮಿಳು ಮುಂತಾದ ಭಾಷೆಗಳಲ್ಲೂ ನಟಿಸಿ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದಾರೆ.