ವಿಪಕ್ಷ ಕಾಂಗ್ರೆಸ್ ನಾಯಕರನ್ನು ಬುಧವಾರ ಲೋಕಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ವಕ್ಫ್ ಆಸ್ತಿ ಕಬಳಿಕೆ ವಿವಾದಗಳನ್ನು ಎಳೆಎಳೆಯಾಗಿ ಪ್ರಸ್ತಾಪಿಸಿ ಬಿಸಿ ಮುಟ್ಟಿಸಿದ್ದಾರೆ.
ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಮಾನತುಗೊಂಡಿರುವ ಪಕ್ಷದ 18 ಶಾಸಕರ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಸಂಬಂಧ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದು ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಹೊಸ ಪಕ್ಷ ಸ್ಥಾಪನೆ ಕುರಿತಂತೆ ಬರುವ ವಿಜಯದಶಮಿ ವೇಳೆಗೆ ರಾಜಕೀಯ ನಿರ್ಧಾರ ಕೈಗೊಳ್ಳುವುದಾಗಿ ಹೇಳಿ ಕುತೂಹಲ ಹುಟ್ಟುಹಾಕಿದ್ದ ಬಿಜೆಪಿ ಉಚ್ಚಾಟಿತ ನಾಯಕ ಬಸನಗೌಡ ಪಾಟೀಲ ಯತ್ನಾಳ, ‘ನಾನು ಪಕ್ಷಕ್ಕೆ ವಾಪಸ್ ತೆಗೆದುಕೊಳ್ಳಿ ಎಂದು ಯಾರಿಗೂ ಕೈ ಮುಗಿಯಲ್ಲ, ಕೈಕಾಲು ಹಿಡಿಯಲ್ಲ’ ಎಂದಿದ್ದಾರೆ.
ಹಾಲು ಸೇರಿ ವಿವಿಧ ಅಗತ್ಯ ವಸ್ತು, ಸೇವೆಗಳ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬುಧವಾರ ಅಹೋರಾತ್ರಿ ಧರಣಿ ನಡೆಸಲಿದೆ. ಈ ಮೂಲಕ ಏ.13ರವರೆಗೆ ವಿವಿಧ ಹಂತಗಳಲ್ಲಿ ಈ ಕುರಿತು ನಡೆಸುವ ಹೋರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದೆ.
‘ನನ್ನ ಗೆಲುವಿಗೆ ಯಡಿಯೂರಪ್ಪ ಅವರ ಶ್ರಮವಿದೆ. ಎಲ್ಲರೂ ಸೇರಿ ಪ್ರಯತ್ನ ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ. ನನ್ನ ಗೆಲುವಿಗೆ ಎಲ್ಲ ಕಾರ್ಯಕರ್ತರು, ವರಿಷ್ಠರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ’ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.2ರಂದು ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಲು ಅನುವಾಗುತ್ತಿದ್ದಂತೆಯೇ ಕಾಂಗ್ರೆಸ್ನಲ್ಲಿ ವಿಧಾನಪರಿಷತ್ ಸ್ಥಾನಾಕಾಂಕ್ಷಿಗಳ ಲಾಬಿ ಮೇರೆ ಮೀರಿದೆ. ಲಭ್ಯವಿರುವ ನಾಲ್ಕು ಸ್ಥಾನಗಳಿಗೆ 40ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸಿದ್ದಾರೆ.
ರಾಜೇಂದ್ರ ಅವರ ಹತ್ಯೆ ಸುಪಾರಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ರಾಜೇಂದ್ರ ಹತ್ಯೆಗೆ ರೌಡಿ ಶೀಟರ್ ಸೋಮು ಎಂಬಾತ ಸಂಚು ನಡೆಸಿದ್ದ ಬಗ್ಗೆ ಪ್ರಕರಣದ ಇತರ ಆರೋಪಿಗಳಾದ ರಾಕಿ ಹಾಗೂ ಪುಷ್ಪಾ ಎಂಬುವರು ಮಾತುಕತೆ ನಡೆಸಿದ್ದ 18 ನಿಮಿಷದ ಸ್ಫೋಟಕ ಆಡಿಯೋ ಬಹಿರಂಗವಾಗಿದೆ.