ಪಹಲ್ಗಾಂನಲ್ಲಿ ಧರ್ಮ ಕೇಳಿ ಮಾರಣಹೋಮ ಮಾಡಲಾಯಿತು : ಮಲ್ಲಿಕಾರ್ಜುನ ಖರ್ಗೆಕೆಲವರು ಜಾತಿ-ಧರ್ಮದ ವಿಚಾರ ಮಾತನಾಡುತ್ತಾ ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದಾರೆ. ಕಾಶ್ಮೀರದ ಪಹಲ್ಗಾಂನಲ್ಲಿ ಧರ್ಮ ಕೇಳಿ ಮಾರಣಹೋಮ ಮಾಡಲಾಯಿತು. ಆ ರೀತಿಯ ದುಷ್ಕೃತ್ಯ ಬೇರೆಲ್ಲೂ ನಡೆಯಬಾರದು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.