ಬಜೆಟ್ನಲ್ಲಿ ಕಡಿಮೆ ಅನುದಾನ ನೀಡಿರುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲು ಹಾಗೂ ಮುಡಾ ಹಾಗೂ ವಾಲ್ಮೀಕಿ ಹಗರಣ ವಿಚಾರಗಳ ಬಗ್ಗೆ ಎಐಸಿಸಿ ವರಿಷ್ಠರಿಗೆ ಸತ್ಯಾಂಶ ವಿವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಹೆಣೆದ ಆಧುನಿಕ ಚಕ್ರವ್ಯೂಹದಲ್ಲಿ ಭಾರತ ಇಂದು ಸಿಲುಕಿದೆ. ಮಹಾಭಾರತದ ಯುದ್ಧದಲ್ಲಿ ಚಕ್ರವ್ಯೂಹದಲ್ಲಿ ಸಿಲುಕಿದ ಅಭಿಮನ್ಯುವಿನ ಜಾಗದಲ್ಲಿ ಇಂದು ಭಾರತದ ಯುವಕರು, ಮಹಿಳೆಯರು, ರೈತರು ಮತ್ತು ಸಣ್ಣ ಉದ್ಯಮಿಗಳು ಇದ್ದಾರೆ’
ಈ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ಡಿ.ಕೆ.ರವಿ ಮತ್ತು ಮನೋಜ್ ಕುಮಾರ್ ಮೀನಾ, ಶಾಸಕರಿಂದ ಸುಮಾರು 47 ಎಕರೆ ಒತ್ತುವರಿಯಾದ ಬಗ್ಗೆ ತನಿಖೆ ನಡೆಸಿ ನೋಟಿಸ್ ಜಾರಿ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದು ವಿಚಾರಣೆ ಹಂತದಲ್ಲಿದೆ.
ಶಾಲೆಗೆ ಬರದೆ ಇದ್ದರೂ, ಪರೀಕ್ಷೆಗೆ ಹಾಜರಾಗದಿದ್ದರು ಪಾಸ್ ಆಗ್ತಾರೆ!, ಸೈಬರ್ ಪೊಲೀಸ್ಗೆ ಸೈಬರ್ ವಂಚಕನ ಗಾಳ ಯತ್ನ
ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವಾಗಲೇ ಕೇಂದ್ರದ ಭಾರಿ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ಆದ ಘಟನೆ ಭಾನುವಾರ ನಡೆದಿದೆ. ಕೂಡಲೇ ಅವರನ್ನು ಜಯನಗರ ಅಪೊಲೋ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ನಾವು ಇನ್ನೂ ಒಪ್ಪಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.