ಸರ್ಕಾರ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ, ಹಾಲು ಉತ್ಪಾದಕರಿಗೆ 5 ಸಬ್ಸಿಡಿ ಹಣದ ಸುಮಾರು 1500 ಕೋಟಿ ಹಣ ಉಳಿಸಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದೆ. ಇದರಿಂದ ರೈತರ ಆತ್ಮಹತ್ಯೆ ಹಾದಿ ಹಿಡಿಯುವಂತಾಗಿದೆ.
ನೀವು ಭ್ರಷ್ಟಾಚಾರದ ಫಲಾನುಭವಿಯೂ ಹೌದು. ಪೋಷಕರು ಹೌದು. ರೀಡೂ ಪಿತಾಮಹ ಯಾರು?, ರೀಡೂ ಹೆಸರಿನಲ್ಲಿ 884 ಎಕರೆ ಡಿ-ನೋಟಿಫೈಕೇಷನ್ ಮಾಡಲಾಯಿತು. ಅದು ಅಕ್ರಮವಲ್ಲವೇ?, ಕೆಂಪಣ್ಣ ಆಯೋಗದ ವರದಿಯಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಹಗರಣ ಆಗಿರುವುದು ತಪ್ಪು ಎಂಬುದು ಸಾಬೀತಾಗಿದೆ.
ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸಲು ವಿಫಲರಾದ ಹಿನ್ನೆಲೆಯಲ್ಲಿ ಇದೀಗ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅದು ಯಾವತ್ತೂ ಯಶಸ್ವಿಯಾಗುವುದಿಲ್ಲ. ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಾಗಿದ ಪಾದಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಯಿತು. ಮಧ್ಯಾಹ್ನದ ವೇಳೆಗೆ ನಗರದ ಸಕ್ಕರೆ ವೃತ್ತದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಪಾದಯಾತ್ರೆಗೆ ಸೇರ್ಪಡೆಯಾದರು.
ಗೌಡರ ಗೌಡ ಪ್ರೀತಂ ಗೌಡ ಎಂಬ ಘೋಷಣೆ ಜೆಡಿಎಸ್ ಕಾರ್ಯಕರ್ತರ ಕಿವಿಗೆ ಬೀಳುತ್ತಿದ್ದಂತೆ ಕೆರಳಿದರು. ಈ ವೇಳೆ ಪ್ರೀತಂಗೌಡ ಬೆಂಬಲಿಗರಿಗೆ ಪ್ರೀತಂ ಪರ ಘೋಷಣೆ ಕೂಗದಂತೆ ಜೆಡಿಎಸ್ ಕಾರ್ಯಕರ್ತರು ತಾಕೀತು ಮಾಡಿದರು. ಆದರೂ ಅದನ್ನು ಲೆಕ್ಕಿಸದೆ ಪ್ರೀತಂ ಕಡೆಯವರು ಘೋಷಣೆ ಕೂಗಿದರು.