ರಾಜ್ಯ ಕಾಂಗ್ರೆಸ್ ಮೇಲೆ ಹಿಡಿತ ಇಲ್ಲದ ಕಾರಣ ಆ ಪಕ್ಷದ ಹೈಕಮಾಂಡ್ ಡಮ್ಮಿ ಹೈಕಮಾಂಡ್ ಎಂಬುದನ್ನು ಜನತೆ ತೀರ್ಮಾನಿಸಿದ್ದಾರೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬಳಿಕ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದ್ದು, ಇದರ ಬೆನ್ನಲ್ಲೇ ಇತರ ಭಿನ್ನಮತೀಯ ಮುಖಂಡರ ಮನವೊಲಿಸಲು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪ್ತರು ಮುಂದಾಗಿದ್ದಾರೆ.
‘ಜಾತಿಗಣತಿ ವರದಿ ಬಗ್ಗೆ ಯಾವುದೇ ಸಚಿವರಿಂದ ವಿರೋಧ ವ್ಯಕ್ತವಾಗಿಲ್ಲ, ಯಾರ ನಡುವೆಯೂ ಮಾತಿನ ಚಕಮಕಿಯೂ ನಡೆದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು
ಗ್ಯಾಸ್ ಸಿಲಿಂಡರ್ಗೆ ಹಾರ ಹಾಕಿದ ಮುಖ್ಯಮಂತ್ರಿ , ಹೆಗಲ ಮೇಲೆ ಸಿಲಿಂಡರ್ ಹೊತ್ತ ಡಿ.ಕೆ.ಶಿವಕುಮಾರ್, ಪ್ಲೆಕಾರ್ಡ್ ಹಿಡಿದ ರಣದೀಪ್ ಸುರ್ಜೇವಾಲಾ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಮೊಳಗಿದ ಘೋಷಣೆಗಳು..
ಬಿಜೆಪಿಯವರು ಇ.ಡಿ, ಸಿಬಿಐ, ಐಟಿ ಸಂಸ್ಥೆಗಳನ್ನು ಗುರಾಣಿಯಂತೆ ಬಳಸಿ ಕಾಂಗ್ರೆಸ್ ಅನ್ನು ಹಣಿಯುವ ಯತ್ನಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಈ ಕುತಂತ್ರಕ್ಕೆ ನಾವು ಜಗ್ಗೋದಿಲ್ಲ, ಬಗ್ಗೋದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ನಗರದಲ್ಲಿ ನಡೆದ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಭಾಷಣದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ ಮೊಹ್ಮದ್ ಯೂನುಸ್ ಅವರ ಅಭಿಮಾನಿ ಎಂದು ಹೇಳಿಕೊಂಡು ಸರ್ವರ ಗಮನ ಸೆಳೆದರು
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಬಗ್ಗೆ ಕೆಲವರು ನೀಡುತ್ತಿರುವ ಬೇಜವಾಬ್ದಾರಿ ಹಾಗೂ ಶಾಂತಿ ಕದಡುವ ಹೇಳಿಕೆ ಖಂಡನೀಯ.
‘ರಾಜ್ಯ ಸರ್ಕಾರವನ್ನು ಬೀಳಿಸಲು ಮೋದಿ ಹಾಗೂ ಅಮಿತ್ ಶಾ ಟೀಂ ಮುಂದಾಗಿದೆ. ಒಗ್ಗಟ್ಟಾಗಿದ್ದು, ಭಿನ್ನಾಭಿಪ್ರಾಯ ಬದಿಗೊತ್ತಿ, ಕುತಂತ್ರವನ್ನು ಎದುರಿಸಿ. ಕಿತ್ತಾಡಿಕೊಳ್ಳುತ್ತಿದ್ದರೆ ಸರ್ಕಾರವನ್ನು ಮುಗಿಸುತ್ತಾರೆ, ಹುಷಾರಾಗಿರಿ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.
ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ವಸತಿ ಶಾಲೆ ಆರಂಭಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಏ.21 ಮತ್ತು 22ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದ್ದನ್ನು ಖಂಡಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಶಾಂತಿನಗರದ ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.