ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ವಿಚಾರವಾಗಿ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ ಕಳೆದ ಜನವರಿಯಲ್ಲಿ ಪ್ರಜ್ವಲ್ ಸಹೋದರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ವಿಚಾರ ಇದೀಗ ಮುನ್ನಲೆಗೆ ಬಂದಿದೆ.
ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಪಡಿಸಿ ಸ್ವದೇಶಕ್ಕೆ ವಾಪಸ್ ಕರೆತರಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಒಂದು ವೇಳೆ ಕಡಿಮೆ ಮತಗಳು ಬಂದರೇ ಗ್ರಾಮಸ್ಥರಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಕಾಗವಾಡ ಶಾಸಕ ರಾಜು ಕಾಗೆ ಎಚ್ಚರಿಕೆ ನೀಡುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ಮಹಿಳೆಯರಿಗೆ ಸುರಕ್ಷಿತವಲ್ಲ. ಇದಕ್ಕೆ ಹುಬ್ಬಳ್ಳಿಯ ನೇಹಾ ಹತ್ಯೆಯೇ ಸಾಕ್ಷಿ. ನಿಮ್ಮಿಂದ (ಕಾಂಗ್ರೆಸ್) ಮಹಿಳೆಯರಿಗೆ ರಕ್ಷಣೆ ಕೊಡಲು ಆಗದಿದ್ದರೆ ಹೊರಹೋಗಿ. ನಾವು ರಕ್ಷಣೆ ನೀಡಿ ತೋರಿಸುತ್ತೇವೆ.
ಅಶ್ಲೀಲ ವಿಡಿಯೋ ಪ್ರಕರಣದ ಆಪಾದಿತ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರೇ ಪ್ಲ್ಯಾನ್ ಮಾಡಿ ವಿದೇಶಕ್ಕೆ ಕಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು,
ಪ್ರಧಾನಿ ನರೇಂದ್ರ ಮೋದಿ, ನಾನು ಜೀವಂತ ಇರುವವರೆಗೂ ಒಬಿಸಿ, ಎಸ್ಸಿ, ಎಸ್ಟಿ ಮೀಸಲು ಕಸಿದು ಅದನ್ನು ಧರ್ಮಾಧಾರಿತವಾಗಿ ಮುಸ್ಲಿಮರಿಗೆ ನೀಡಲು ಬಿಡಲ್ಲ ಎಂದು ಗುಡುಗಿದ್ದಾರೆ.
ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕ ಅಲ್ಲ, ಯಾವ ರಾಜ್ಯಕ್ಕೂ ಅನ್ಯಾಯ ಮಾಡಿಲ್ಲ - ಮಹದಾಯಿ ಯೋಜನೆ ಜಾರಿ ನಮ್ಮ ಕರ್ತವ್ಯ, ಬದ್ಧತೆ: ಆ ಕೆಲಸವನ್ನು ಮಾಡಿಯೇ ತೀರುತ್ತೇವೆ