ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದ್ದು, ಕಾಂಗ್ರೆಸ್ ಪಕ್ಷ ವಕ್ಫ್ ಕಾಯ್ದೆ ತಿದ್ದುಪಡಿಯನ್ನು ರಾಜ್ಯ ಮತ್ತು ದೇಶದಲ್ಲಿ ವಿರೋಧಿಸುವುದು ಒಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬೆನ್ನ ಹಿಂದೆಯೇ ಅವರ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮುಂಬೈನಲ್ಲಿ ಭೇಟಿಯಾಗಿ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಚರ್ಚೆ ವೇಳೆ, ತಮ್ಮ ಕುಟುಂಬ ವಕ್ಫ್ ಆಸ್ತಿ ಕಬಳಿಸಿದೆ ಗಂಭೀರ ಆರೋಪಗಳನ್ನು ಮಾಡಿದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ವಿಧಾನಪರಿಷತ್ ನೇಮಕ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹಾಗೂ ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ವಿಪಕ್ಷ ಕಾಂಗ್ರೆಸ್ ನಾಯಕರನ್ನು ಬುಧವಾರ ಲೋಕಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ವಕ್ಫ್ ಆಸ್ತಿ ಕಬಳಿಕೆ ವಿವಾದಗಳನ್ನು ಎಳೆಎಳೆಯಾಗಿ ಪ್ರಸ್ತಾಪಿಸಿ ಬಿಸಿ ಮುಟ್ಟಿಸಿದ್ದಾರೆ.
ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಮಾನತುಗೊಂಡಿರುವ ಪಕ್ಷದ 18 ಶಾಸಕರ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಸಂಬಂಧ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದು ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.