ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ 60 ಸಾವಿರ ಲೀಡ್ ಬಂದರೆ ತಮ್ಮನ್ನು ಯಾರೂ ಮುಟ್ಟಲಿಕ್ಕಾಗಲ್ಲ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನಸ್ಸಿನ ಮಾತು. ಒಂದು ವೇಳೆ ಹಿನ್ನಡೆಯಾದರೆ ತಮ್ಮನ್ನು ಬದಲಾವಣೆ ಮಾಡುತ್ತಾರೆ ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ನೀಡದೆ ತಮ್ಮ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಲೇವಡಿ ಮಾಡಿರುವ ಅಮಿತ್ ಶಾ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ಗೆ ಖಾತೆ ತೆರೆಯುವುದಕ್ಕೇ ಬಿಡಬಾರದು ಎಂದು ಕರೆ ನೀಡಿದ್ದಾರೆ.