ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಚನೆಯಾದ ಬಳಿಕ ಎರಡನೇ ಬಾರಿಗೆ ಮುಖಭಂಗ ಉಂಟಾಗಿದೆ. ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ ಮುಖಂಡ ಎ.ಪಿ.ರಂಗನಾಥ್ ಅವರಿಗೆ ಸೋಲು ಉಂಟಾಗಿತ್ತು.
‘ಕಾಂಗ್ರೆಸ್ನಿಂದ ಗೆದ್ದಿರುವ ಮೂರು ಮಂದಿ ರಾಜ್ಯಸಭೆ ಸಭೆ ಸದಸ್ಯರು ತೆರಿಗೆ ಪಾಲು ಕಡಿತ, ವಿಶೇಷ ಅನುದಾನ ನಿರಾಕರಣೆ, ಅಭಿವೃದ್ದಿ ಯೋಜನೆಗಳಿಗೆ ದೊರಕದ ಅನುದಾನ ಸೇರಿದಂತೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ವಿರುದ್ಧ ರಾಜ್ಯಸಭೆಯಲ್ಲಿ ಧ್ವನಿ ಎತ್ತಲಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.