ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಂಡಿರುವ ರಾಜ್ಯ ಬಿಜೆಪಿ ಫೆ.3ರಿಂದ ಮೂರು ದಿನಗಳ ಕಾಲ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕಾರಿಣಿ ಸಭೆ ಹಾಗೂ ಫೆಬ್ರವರಿಯಲ್ಲಿ ‘ನಾರಿ ಶಕ್ತಿ ವಂದನಾ’ ಸಮಾವೇಶಗಳನ್ನು ನಡೆಸುವ ತೀರ್ಮಾನವನ್ನು ಕೈಗೊಂಡಿದೆ.
ಬಿಹಾರ ರಾಜಕೀಯ ಬೃಹನ್ನಾಟಕ ಶನಿವಾರವೂ ಮುಂದುವರೆದಿದ್ದು, ಬಿಜೆಪಿ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮರುಮೈತ್ರಿಗೆ ಅಂತಿಮ ವೇದಿಕೆ ಸಿದ್ಧವಾಗಿದೆ.
ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಮಟ್ಟದ ನಿಗಮ ಮಂಡಳಿ ನೇಮಕ ಪಟ್ಟಿ ಹೊರ ಬಿದ್ದಿದ್ದು ಜಿಲ್ಲೆಯ ಶಾಸಕರೊಬ್ಬರು ರಾಜ್ಯ ಮಟ್ಟದ ನಿಗಮ ಮಂಡಳಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜಯೇಂದ್ರ ಬಿಜೆಪ ರಾಜ್ಯ ಅಧ್ಯಕ್ಷ ಆದ ನಂತರದ ಮೊದಲ ಸಭೆ ನಡೆಯಲಿದೆ. ಇದರಲ್ಲಿ 900 ಆಹ್ವಾನಿತರು ಭಾಗಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ.
ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಜಯಗಳಿಸಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ನಾವು ಮಾತುಗಾರರಲ್ಲ, ಕೆಲಸಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ವಾಪಸ್ ಹೋಗಿದ್ದರಿಂದ ನಮಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಕಳೆದ ಚುನಾವಣೆ ವೇಳೆ ಬಿಜೆಪಿಯಲ್ಲಿ ನೋವಾಗಿದೆ ಎಂದು ಅವರೇ ಬಂದರು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸೋತರು.