ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷದೊಳಗೆ ‘ಲೋಕ ಟಿಕೆಟ್’ ಕದನ...!ಮಂಡ್ಯದೊಳಗೆ ಜೆಡಿಎಸ್ ೧ ಕ್ಷೇತ್ರದಲ್ಲಷ್ಟೇ ಗೆಲುವು ಸಾಧಿಸಿದ್ದು, ೬ ಕ್ಷೇತ್ರಗಳಲ್ಲಿ ಸೋಲನುಭವಿಸಿದೆ. ಜೆಡಿಎಸ್ಗೆ ಸರಿಸಮನಾಗಿ ಬಿಜೆಪಿ ಪ್ರಾಬಲ್ಯ ವೃದ್ಧಿಸಿದೆ. ಜಿಲ್ಲೆಯಲ್ಲಿ ಬಿಜೆಪಿ ಪರವಾದ ಮತದಾರರು ಹೆಚ್ಚಾಗಿದ್ದಾರೆ. ಶ್ರೀರಾಮಮಂದಿರ ಉದ್ಘಾಟನೆ ಬಳಿಕ ಜಿಲ್ಲೆಯೊಳಗೆ ಬಿಜೆಪಿ ವೋಟ್ ಬ್ಯಾಂಕ್ ವೃದ್ಧಿಸಿದೆ. ಹಾಗಾಗಿ ಕ್ಷೇತ್ರವನ್ನು ಉಳಿಸಿಕೊಂಡು ನಾವೇ ಗೆಲುವಿಗೆ ಶ್ರಮಿಸಬಹುದು ಎಂಬ ಅಭಿಪ್ರಾಯವನ್ನು ಬಿಜೆಪಿಗರು ವರಿಷ್ಠರ ಮುಂದಿಡುತ್ತಿದ್ದಾರೆ.