ಮನೆಯಲ್ಲಿ 4.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಬೆಂಗಳೂರಿನ ಯಶವಂತಪುರ ಅಂಬೇಡ್ಕರ್ ನಗರದ 6ನೇ ಕ್ರಾಸ್ ವಾಸಿ ವಸೀಂ ಖಾನ್ ಪತ್ನಿ ಫರ್ಹಾನ್ ತಾಜ್ ಎಂಬುವರು ಸುಮಾರು 365 ಗ್ರಾಂ ಚಿನ್ನಾಭರಣ ಕಳುವಾಗಿರುವ ಕುರಿತು ಬೆಂಗಳುರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆ ಪ್ರಕರಣ ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಕಳೆದ ನ.29 ರಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಿಂದ ರಾಮನಗರ ಪುರ ಪೊಲೀಸ್ ಠಾಣೆಗೆ ಟಪಾಲ್ ಬಂದಿದೆ, ಅದನ್ನು ಪರಿಶೀಲಿಸಿಲಾಗಿ ಕೃತ್ಯ ನಡೆದ ಸ್ಥಳದ ಆಧಾರದ ಮೇರೆಗೆ ಪ್ರಕರಣದ ಕಡತವನ್ನು ರಾಮನಗರ ಪುರ ಪೊಲೀಸ್ ಠಾಣೆಗೆ ಬೆಂಗಳೂರು ನಗರದ ಯಶವಂತಪುರ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಿದ್ದರು ಎಂಬುದಾಗಿತ್ತು.ಆ ಮೇರೆಗೆ ರಾಮನಗರ ಪುರ ಪೊಲೀಸ್ ಠಾಣೆಯವರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.